ಹರ್ಯಾಣ: ಪ್ಯಾರಿಸ್ ಒಲಂಪಿಕ್ಸ್ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಹರ್ಯಾಣದ ಸಿಎಂ ನಯಾಬ್ ಸಿಂಗ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…