ಕ್ರೀಡೆ

ಹಾಶೀಂ ಆಮ್ಲಾ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ

ಕರಾಚಿ: ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಕೊನೆಯ ಪಂದ್ಯದಲ್ಲಿ ಸೋತರೂ 4-1 ಅಂತರದಿಂದ ಪಾಕ್ ತಂಡವು ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದ ವೇಳೆ ಪಾಕಿಸ್ಥಾನದ ನಾಯಕ ಬಾಬರ್ ಅಜಂ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಭಾನುವಾರ ನೂರನೇ ಏಕದಿನ ಪಂದ್ಯವಾಡಿದ ಬಾಬರ್ ಮೊದಲ ನೂರು ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ರವಿವಾರದ ಪಂದ್ಯದಲ್ಲಿ ಬಾಬರ್ ಕೇವಲ ಒಂದು ರನ್ ಗೆ ಔಟಾದರು. ಒಟ್ಟು ನೂರು ಏಕದಿನ ಪಂದ್ಯದಲ್ಲಿ ಬಾಬರ್ 5089 ರನ್ ಗಳಿಸಿದ್ದಾರೆ. ನೂರು ಪಂದ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಬಾಬರ್.

100 ಏಕದಿನ ಪಂದ್ಯಗಳ ನಂತರ ಗಳಿಸಿದ ರನ್‌ ಗಳ ವಿಷಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಬರ್‌ನ ದಾಖಲೆಗಿಂತ ಬಹಳ ಹಿಂದಿದ್ದಾರೆ. ಕೊಹ್ಲಿ 100 ಪಂದ್ಯಗಳ ನಂತರ 48.89 ಸರಾಸರಿಯಲ್ಲಿ 4,107 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಕೊಹ್ಲಿ ಈಗ 274 ಏಕದಿನ ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 46 ಶತಕಗಳು ಮತ್ತು 65 ಅರ್ಧಶತಕಗಳೊಂದಿಗೆ 12,898 ರನ್ ಗಳಿಸಿದ್ದಾರೆ. ಬಾಬರ್ 100 ಏಕದಿನ ಪಂದ್ಯಗಳಲ್ಲಿ 18 ಶತಕ ಮತ್ತು 26 ಅರ್ಧಶತಕಗಳೊಂದಿಗೆ 5,089 ರನ್ ಗಳಿಸಿದ್ದಾರೆ.

100 ಪಂದ್ಯಗಳ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ…

  1. ಬಾಬರ್ ಆಜಮ್ – 5,089 ರನ್
  2. ಹಾಶಿಮ್ ಆಮ್ಲ – 4,808 ರನ್
  3. ಶಿಖರ್ ಧವನ್ – 4,309 ರನ್
  4. ಡೇವಿಡ್ ವಾರ್ನರ್ – 4,217 ರನ್
  5. ಶಾಯ್ ಹೋಪ್ – 4,193 ರನ್
  6. ಗಾರ್ಡನ್ ಗ್ರೀನಿಡ್ಜ್ – 4,177 ರನ್
andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

7 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago