ಕ್ರೀಡೆ

ಹಾಶೀಂ ಆಮ್ಲಾ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ

ಕರಾಚಿ: ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಕೊನೆಯ ಪಂದ್ಯದಲ್ಲಿ ಸೋತರೂ 4-1 ಅಂತರದಿಂದ ಪಾಕ್ ತಂಡವು ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದ ವೇಳೆ ಪಾಕಿಸ್ಥಾನದ ನಾಯಕ ಬಾಬರ್ ಅಜಂ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಭಾನುವಾರ ನೂರನೇ ಏಕದಿನ ಪಂದ್ಯವಾಡಿದ ಬಾಬರ್ ಮೊದಲ ನೂರು ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ರವಿವಾರದ ಪಂದ್ಯದಲ್ಲಿ ಬಾಬರ್ ಕೇವಲ ಒಂದು ರನ್ ಗೆ ಔಟಾದರು. ಒಟ್ಟು ನೂರು ಏಕದಿನ ಪಂದ್ಯದಲ್ಲಿ ಬಾಬರ್ 5089 ರನ್ ಗಳಿಸಿದ್ದಾರೆ. ನೂರು ಪಂದ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಬಾಬರ್.

100 ಏಕದಿನ ಪಂದ್ಯಗಳ ನಂತರ ಗಳಿಸಿದ ರನ್‌ ಗಳ ವಿಷಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಬರ್‌ನ ದಾಖಲೆಗಿಂತ ಬಹಳ ಹಿಂದಿದ್ದಾರೆ. ಕೊಹ್ಲಿ 100 ಪಂದ್ಯಗಳ ನಂತರ 48.89 ಸರಾಸರಿಯಲ್ಲಿ 4,107 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಕೊಹ್ಲಿ ಈಗ 274 ಏಕದಿನ ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 46 ಶತಕಗಳು ಮತ್ತು 65 ಅರ್ಧಶತಕಗಳೊಂದಿಗೆ 12,898 ರನ್ ಗಳಿಸಿದ್ದಾರೆ. ಬಾಬರ್ 100 ಏಕದಿನ ಪಂದ್ಯಗಳಲ್ಲಿ 18 ಶತಕ ಮತ್ತು 26 ಅರ್ಧಶತಕಗಳೊಂದಿಗೆ 5,089 ರನ್ ಗಳಿಸಿದ್ದಾರೆ.

100 ಪಂದ್ಯಗಳ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ…

  1. ಬಾಬರ್ ಆಜಮ್ – 5,089 ರನ್
  2. ಹಾಶಿಮ್ ಆಮ್ಲ – 4,808 ರನ್
  3. ಶಿಖರ್ ಧವನ್ – 4,309 ರನ್
  4. ಡೇವಿಡ್ ವಾರ್ನರ್ – 4,217 ರನ್
  5. ಶಾಯ್ ಹೋಪ್ – 4,193 ರನ್
  6. ಗಾರ್ಡನ್ ಗ್ರೀನಿಡ್ಜ್ – 4,177 ರನ್
andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

2 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

2 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

3 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

3 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

3 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

4 hours ago