ಕ್ರೀಡೆ

ಹಾಶೀಂ ಆಮ್ಲಾ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ

ಕರಾಚಿ: ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಕೊನೆಯ ಪಂದ್ಯದಲ್ಲಿ ಸೋತರೂ 4-1 ಅಂತರದಿಂದ ಪಾಕ್ ತಂಡವು ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದ ವೇಳೆ ಪಾಕಿಸ್ಥಾನದ ನಾಯಕ ಬಾಬರ್ ಅಜಂ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಭಾನುವಾರ ನೂರನೇ ಏಕದಿನ ಪಂದ್ಯವಾಡಿದ ಬಾಬರ್ ಮೊದಲ ನೂರು ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ರವಿವಾರದ ಪಂದ್ಯದಲ್ಲಿ ಬಾಬರ್ ಕೇವಲ ಒಂದು ರನ್ ಗೆ ಔಟಾದರು. ಒಟ್ಟು ನೂರು ಏಕದಿನ ಪಂದ್ಯದಲ್ಲಿ ಬಾಬರ್ 5089 ರನ್ ಗಳಿಸಿದ್ದಾರೆ. ನೂರು ಪಂದ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಬಾಬರ್.

100 ಏಕದಿನ ಪಂದ್ಯಗಳ ನಂತರ ಗಳಿಸಿದ ರನ್‌ ಗಳ ವಿಷಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಬರ್‌ನ ದಾಖಲೆಗಿಂತ ಬಹಳ ಹಿಂದಿದ್ದಾರೆ. ಕೊಹ್ಲಿ 100 ಪಂದ್ಯಗಳ ನಂತರ 48.89 ಸರಾಸರಿಯಲ್ಲಿ 4,107 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಕೊಹ್ಲಿ ಈಗ 274 ಏಕದಿನ ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 46 ಶತಕಗಳು ಮತ್ತು 65 ಅರ್ಧಶತಕಗಳೊಂದಿಗೆ 12,898 ರನ್ ಗಳಿಸಿದ್ದಾರೆ. ಬಾಬರ್ 100 ಏಕದಿನ ಪಂದ್ಯಗಳಲ್ಲಿ 18 ಶತಕ ಮತ್ತು 26 ಅರ್ಧಶತಕಗಳೊಂದಿಗೆ 5,089 ರನ್ ಗಳಿಸಿದ್ದಾರೆ.

100 ಪಂದ್ಯಗಳ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ…

  1. ಬಾಬರ್ ಆಜಮ್ – 5,089 ರನ್
  2. ಹಾಶಿಮ್ ಆಮ್ಲ – 4,808 ರನ್
  3. ಶಿಖರ್ ಧವನ್ – 4,309 ರನ್
  4. ಡೇವಿಡ್ ವಾರ್ನರ್ – 4,217 ರನ್
  5. ಶಾಯ್ ಹೋಪ್ – 4,193 ರನ್
  6. ಗಾರ್ಡನ್ ಗ್ರೀನಿಡ್ಜ್ – 4,177 ರನ್
andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

19 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

7 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

7 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

7 hours ago