ಕ್ರೀಡೆ

ಹಾಶೀಂ ಆಮ್ಲಾ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ

ಕರಾಚಿ: ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಕೊನೆಯ ಪಂದ್ಯದಲ್ಲಿ ಸೋತರೂ 4-1 ಅಂತರದಿಂದ ಪಾಕ್ ತಂಡವು ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದ ವೇಳೆ ಪಾಕಿಸ್ಥಾನದ ನಾಯಕ ಬಾಬರ್ ಅಜಂ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಭಾನುವಾರ ನೂರನೇ ಏಕದಿನ ಪಂದ್ಯವಾಡಿದ ಬಾಬರ್ ಮೊದಲ ನೂರು ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ರವಿವಾರದ ಪಂದ್ಯದಲ್ಲಿ ಬಾಬರ್ ಕೇವಲ ಒಂದು ರನ್ ಗೆ ಔಟಾದರು. ಒಟ್ಟು ನೂರು ಏಕದಿನ ಪಂದ್ಯದಲ್ಲಿ ಬಾಬರ್ 5089 ರನ್ ಗಳಿಸಿದ್ದಾರೆ. ನೂರು ಪಂದ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಬಾಬರ್.

100 ಏಕದಿನ ಪಂದ್ಯಗಳ ನಂತರ ಗಳಿಸಿದ ರನ್‌ ಗಳ ವಿಷಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಬರ್‌ನ ದಾಖಲೆಗಿಂತ ಬಹಳ ಹಿಂದಿದ್ದಾರೆ. ಕೊಹ್ಲಿ 100 ಪಂದ್ಯಗಳ ನಂತರ 48.89 ಸರಾಸರಿಯಲ್ಲಿ 4,107 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಕೊಹ್ಲಿ ಈಗ 274 ಏಕದಿನ ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 46 ಶತಕಗಳು ಮತ್ತು 65 ಅರ್ಧಶತಕಗಳೊಂದಿಗೆ 12,898 ರನ್ ಗಳಿಸಿದ್ದಾರೆ. ಬಾಬರ್ 100 ಏಕದಿನ ಪಂದ್ಯಗಳಲ್ಲಿ 18 ಶತಕ ಮತ್ತು 26 ಅರ್ಧಶತಕಗಳೊಂದಿಗೆ 5,089 ರನ್ ಗಳಿಸಿದ್ದಾರೆ.

100 ಪಂದ್ಯಗಳ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ…

  1. ಬಾಬರ್ ಆಜಮ್ – 5,089 ರನ್
  2. ಹಾಶಿಮ್ ಆಮ್ಲ – 4,808 ರನ್
  3. ಶಿಖರ್ ಧವನ್ – 4,309 ರನ್
  4. ಡೇವಿಡ್ ವಾರ್ನರ್ – 4,217 ರನ್
  5. ಶಾಯ್ ಹೋಪ್ – 4,193 ರನ್
  6. ಗಾರ್ಡನ್ ಗ್ರೀನಿಡ್ಜ್ – 4,177 ರನ್
andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago