ಕ್ರೀಡೆ

ಹಾಶೀಂ ಆಮ್ಲಾ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ

ಕರಾಚಿ: ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿದೆ. ಕೊನೆಯ ಪಂದ್ಯದಲ್ಲಿ ಸೋತರೂ 4-1 ಅಂತರದಿಂದ ಪಾಕ್ ತಂಡವು ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದ ವೇಳೆ ಪಾಕಿಸ್ಥಾನದ ನಾಯಕ ಬಾಬರ್ ಅಜಂ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಭಾನುವಾರ ನೂರನೇ ಏಕದಿನ ಪಂದ್ಯವಾಡಿದ ಬಾಬರ್ ಮೊದಲ ನೂರು ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ರವಿವಾರದ ಪಂದ್ಯದಲ್ಲಿ ಬಾಬರ್ ಕೇವಲ ಒಂದು ರನ್ ಗೆ ಔಟಾದರು. ಒಟ್ಟು ನೂರು ಏಕದಿನ ಪಂದ್ಯದಲ್ಲಿ ಬಾಬರ್ 5089 ರನ್ ಗಳಿಸಿದ್ದಾರೆ. ನೂರು ಪಂದ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಬಾಬರ್.

100 ಏಕದಿನ ಪಂದ್ಯಗಳ ನಂತರ ಗಳಿಸಿದ ರನ್‌ ಗಳ ವಿಷಯದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಬರ್‌ನ ದಾಖಲೆಗಿಂತ ಬಹಳ ಹಿಂದಿದ್ದಾರೆ. ಕೊಹ್ಲಿ 100 ಪಂದ್ಯಗಳ ನಂತರ 48.89 ಸರಾಸರಿಯಲ್ಲಿ 4,107 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಕೊಹ್ಲಿ ಈಗ 274 ಏಕದಿನ ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 46 ಶತಕಗಳು ಮತ್ತು 65 ಅರ್ಧಶತಕಗಳೊಂದಿಗೆ 12,898 ರನ್ ಗಳಿಸಿದ್ದಾರೆ. ಬಾಬರ್ 100 ಏಕದಿನ ಪಂದ್ಯಗಳಲ್ಲಿ 18 ಶತಕ ಮತ್ತು 26 ಅರ್ಧಶತಕಗಳೊಂದಿಗೆ 5,089 ರನ್ ಗಳಿಸಿದ್ದಾರೆ.

100 ಪಂದ್ಯಗಳ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ…

  1. ಬಾಬರ್ ಆಜಮ್ – 5,089 ರನ್
  2. ಹಾಶಿಮ್ ಆಮ್ಲ – 4,808 ರನ್
  3. ಶಿಖರ್ ಧವನ್ – 4,309 ರನ್
  4. ಡೇವಿಡ್ ವಾರ್ನರ್ – 4,217 ರನ್
  5. ಶಾಯ್ ಹೋಪ್ – 4,193 ರನ್
  6. ಗಾರ್ಡನ್ ಗ್ರೀನಿಡ್ಜ್ – 4,177 ರನ್
andolanait

Recent Posts

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 mins ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

31 mins ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

2 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

4 hours ago