ಕ್ರೀಡೆ

ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ನಿವೃತ್ತಿ

ಇಂಗ್ಲೆಂಡ್‌ : ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ಅವರು ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಪ್ರಕಟಿಸಿದ್ದಾರೆ. ಇದರೊಂದಿಗೆ ಎರಡು ದಶಕಗಳ ಸುದೀರ್ಘ ಕ್ರಿಕೆಟ್‌ ವೃತ್ತಿಜೀವನಕ್ಕೆ ತೆರೆಬಿದ್ದಿದೆ.

39 ವರ್ಷದ ಹಾಶಿಮ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ 2019 ರಲ್ಲೇ ನಿವೃತ್ತಿಯಾಗಿದ್ದರು. ಆ ಬಳಿಕ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ನಲ್ಲಿ ಸರೆ ತಂಡದ ಪರ ಆಡುತ್ತಿದ್ದರು. ಅವರು ನಿವೃತ್ತಿಯಾಗಿರುವ ವಿಷಯವನ್ನು ಸರೆ ತಂಡ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

2013 ಮತ್ತು 2014 ರಲ್ಲಿ ಸರೆ ತಂಡವನ್ನು ಪ್ರತಿನಿಧಿಸಿದ್ದ ಅವರು, 2019 ರಲ್ಲಿ ಮತ್ತೆ ಆ ತಂಡದ ಜತೆ ಒಪ್ಪಂದ ಮಾಡಿಕೊಂಡಿದ್ದರು. ಕಳೆದ ವರ್ಷ ಸರೆ ತಂಡ ಕೌಂಟಿ ಚಾಂಪಿಯನ್‌ಷಿಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2004 ರಿಂದ 2019ರ ಅವಧಿಯಲ್ಲಿ ಅವರು ದಕ್ಷಿಣ ಆಫ್ರಿಕಾ ತಂಡದ ಪರ 124 ಟೆಸ್ಟ್‌, 181 ಏಕದಿನ ಮತ್ತು 44 ಟಿ20 ಪಂದ್ಯಗಳನ್ನು ಆಡಿದ್ದರು. ಮೂರೂ ಮಾದರಿಗಳಲ್ಲಿ ಒಟ್ಟು 18,672 ರನ್‌ಗಳನ್ನು ಕಲೆಹಾಕಿದ್ದರು.

ಟೆಸ್ಟ್‌ನಲ್ಲಿ ತ್ರಿಶತಕ ದಾಖಲಿಸಿದ ದಕ್ಷಿಣ ಆಫ್ರಿಕಾದ ಏಕೈಕ ಬ್ಯಾಟರ್‌ ಎಂಬ ಹೆಗ್ಗಳಿಕೆ ಅವರದ್ದು. 2012 ರಲ್ಲಿ ಇಂಗ್ಲೆಂಡ್‌ ವಿರುದ್ಧ ಗಳಿಸಿದ್ದ 311 ರನ್‌ಗಳು ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್‌ ಒಬ್ಬ ಗಳಿಸಿದ ಅತಿದೊಡ್ಡ ಮೊತ್ತ ಎಂಬ ದಾಖಲೆಯಾಗಿ ಉಳಿದುಕೊಂಡಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago