ಕ್ರೀಡೆ

ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ನಿವೃತ್ತಿ

ಇಂಗ್ಲೆಂಡ್‌ : ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ಅವರು ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಪ್ರಕಟಿಸಿದ್ದಾರೆ. ಇದರೊಂದಿಗೆ ಎರಡು ದಶಕಗಳ ಸುದೀರ್ಘ ಕ್ರಿಕೆಟ್‌ ವೃತ್ತಿಜೀವನಕ್ಕೆ ತೆರೆಬಿದ್ದಿದೆ.

39 ವರ್ಷದ ಹಾಶಿಮ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ 2019 ರಲ್ಲೇ ನಿವೃತ್ತಿಯಾಗಿದ್ದರು. ಆ ಬಳಿಕ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ನಲ್ಲಿ ಸರೆ ತಂಡದ ಪರ ಆಡುತ್ತಿದ್ದರು. ಅವರು ನಿವೃತ್ತಿಯಾಗಿರುವ ವಿಷಯವನ್ನು ಸರೆ ತಂಡ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

2013 ಮತ್ತು 2014 ರಲ್ಲಿ ಸರೆ ತಂಡವನ್ನು ಪ್ರತಿನಿಧಿಸಿದ್ದ ಅವರು, 2019 ರಲ್ಲಿ ಮತ್ತೆ ಆ ತಂಡದ ಜತೆ ಒಪ್ಪಂದ ಮಾಡಿಕೊಂಡಿದ್ದರು. ಕಳೆದ ವರ್ಷ ಸರೆ ತಂಡ ಕೌಂಟಿ ಚಾಂಪಿಯನ್‌ಷಿಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2004 ರಿಂದ 2019ರ ಅವಧಿಯಲ್ಲಿ ಅವರು ದಕ್ಷಿಣ ಆಫ್ರಿಕಾ ತಂಡದ ಪರ 124 ಟೆಸ್ಟ್‌, 181 ಏಕದಿನ ಮತ್ತು 44 ಟಿ20 ಪಂದ್ಯಗಳನ್ನು ಆಡಿದ್ದರು. ಮೂರೂ ಮಾದರಿಗಳಲ್ಲಿ ಒಟ್ಟು 18,672 ರನ್‌ಗಳನ್ನು ಕಲೆಹಾಕಿದ್ದರು.

ಟೆಸ್ಟ್‌ನಲ್ಲಿ ತ್ರಿಶತಕ ದಾಖಲಿಸಿದ ದಕ್ಷಿಣ ಆಫ್ರಿಕಾದ ಏಕೈಕ ಬ್ಯಾಟರ್‌ ಎಂಬ ಹೆಗ್ಗಳಿಕೆ ಅವರದ್ದು. 2012 ರಲ್ಲಿ ಇಂಗ್ಲೆಂಡ್‌ ವಿರುದ್ಧ ಗಳಿಸಿದ್ದ 311 ರನ್‌ಗಳು ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್‌ ಒಬ್ಬ ಗಳಿಸಿದ ಅತಿದೊಡ್ಡ ಮೊತ್ತ ಎಂಬ ದಾಖಲೆಯಾಗಿ ಉಳಿದುಕೊಂಡಿದೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

7 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

8 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

10 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

11 hours ago