ಕ್ರೀಡೆ

ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ನಿವೃತ್ತಿ

ಇಂಗ್ಲೆಂಡ್‌ : ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹಾಶಿಮ್‌ ಆಮ್ಲಾ ಅವರು ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಪ್ರಕಟಿಸಿದ್ದಾರೆ. ಇದರೊಂದಿಗೆ ಎರಡು ದಶಕಗಳ ಸುದೀರ್ಘ ಕ್ರಿಕೆಟ್‌ ವೃತ್ತಿಜೀವನಕ್ಕೆ ತೆರೆಬಿದ್ದಿದೆ.

39 ವರ್ಷದ ಹಾಶಿಮ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ 2019 ರಲ್ಲೇ ನಿವೃತ್ತಿಯಾಗಿದ್ದರು. ಆ ಬಳಿಕ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ನಲ್ಲಿ ಸರೆ ತಂಡದ ಪರ ಆಡುತ್ತಿದ್ದರು. ಅವರು ನಿವೃತ್ತಿಯಾಗಿರುವ ವಿಷಯವನ್ನು ಸರೆ ತಂಡ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

2013 ಮತ್ತು 2014 ರಲ್ಲಿ ಸರೆ ತಂಡವನ್ನು ಪ್ರತಿನಿಧಿಸಿದ್ದ ಅವರು, 2019 ರಲ್ಲಿ ಮತ್ತೆ ಆ ತಂಡದ ಜತೆ ಒಪ್ಪಂದ ಮಾಡಿಕೊಂಡಿದ್ದರು. ಕಳೆದ ವರ್ಷ ಸರೆ ತಂಡ ಕೌಂಟಿ ಚಾಂಪಿಯನ್‌ಷಿಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2004 ರಿಂದ 2019ರ ಅವಧಿಯಲ್ಲಿ ಅವರು ದಕ್ಷಿಣ ಆಫ್ರಿಕಾ ತಂಡದ ಪರ 124 ಟೆಸ್ಟ್‌, 181 ಏಕದಿನ ಮತ್ತು 44 ಟಿ20 ಪಂದ್ಯಗಳನ್ನು ಆಡಿದ್ದರು. ಮೂರೂ ಮಾದರಿಗಳಲ್ಲಿ ಒಟ್ಟು 18,672 ರನ್‌ಗಳನ್ನು ಕಲೆಹಾಕಿದ್ದರು.

ಟೆಸ್ಟ್‌ನಲ್ಲಿ ತ್ರಿಶತಕ ದಾಖಲಿಸಿದ ದಕ್ಷಿಣ ಆಫ್ರಿಕಾದ ಏಕೈಕ ಬ್ಯಾಟರ್‌ ಎಂಬ ಹೆಗ್ಗಳಿಕೆ ಅವರದ್ದು. 2012 ರಲ್ಲಿ ಇಂಗ್ಲೆಂಡ್‌ ವಿರುದ್ಧ ಗಳಿಸಿದ್ದ 311 ರನ್‌ಗಳು ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್‌ ಒಬ್ಬ ಗಳಿಸಿದ ಅತಿದೊಡ್ಡ ಮೊತ್ತ ಎಂಬ ದಾಖಲೆಯಾಗಿ ಉಳಿದುಕೊಂಡಿದೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

3 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

3 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

3 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

4 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago