ಕ್ರೀಡೆ

ಈತ 3 ಸ್ವರೂಪಗಳಲ್ಲಿ ಆಡಬೇಕು: ಯುವ ಆಟಗಾರನ ಬಗ್ಗೆ ಗೌತಮ್ ಗಂಭೀರ್ ಮೆಚ್ಚುಗೆ!

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಲಂಡನ್ ನ ದಿ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ಬೆನ್ನಲ್ಲೇ ಯುವ ಆಟಗಾರರಿಗೆ ಮಣೆ ಹಾಕಿರುವ ಬಿಸಿಸಿಐ ತಂಡವನ್ನು ಬಲಿಷ್ಠಗೊಳಿಸಿ ಆ ಮೂಲಕ ಟ್ರೋಫಿ ಗೆಲ್ಲಲು ರಣತಂತ್ರ ರೂಪಿಸಿದೆ. ಈ ನಡುವೆ ವಿಶ್ವಕಪ್ ವಿಜೇತ ಆಟಗಾರ ಗೌತಮ್ ಗಂಭೀರ್, ರಾಜಸ್ಥಾನ್ ರಾಯಲ್ಸ್ ನ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಪರ ಬ್ಯಾಟಿಂಗ್ ನಡೆಸಿದ್ದು, ಯುವ ಆಟಗಾರನಿಗೆ 3 ಸ್ವರೂಪದಲ್ಲೂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನ್ಯೂಸ್ 18 ಜೊತೆ ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್, ಯುವ ಎಡಗೈ ಆಟಗಾರ ದೇಶಿ ಕ್ರಿಕೆಟ್ ನಲ್ಲಿ ಉತ್ತಮ ಫಾರ್ಮ್ ನಲ್ಲಿದ್ದು ಟೀಮ್ ಇಂಡಿಯಾದ 3 ಸ್ವರೂಪರ ಕ್ರಿಕೆಟ್ ನಲ್ಲಿ ಸ್ಥಾನ ನೀಡಬೇಕು ಎಂದು ಬಯಸಿದ್ದಾರೆ.

“ಯಶಸ್ವಿ ಜೈಸ್ವಾಲ್ ಅವರು ಐಪಿಎಲ್ ನಲ್ಲಿ ಮಾತ್ರ ಮಿಂಚು ಹರಿಸಿಲ್ಲ. ದೇಶಿಯ ಕ್ರಿಕೆಟ್ ನಲ್ಲೂ ಸ್ಫೋಟಕ ಬ್ಯಾಟ್ ಮಾಡಿ ದ್ವಿಶತಕ, ತ್ರಿಶಕ ಬಾರಿಸಿ ಗಮನ ಸೆಳೆದಿದ್ದಾರೆ. ವಿಜಯ್ ಹಜಾರೆ ಟೂರ್ನಿಯಲ್ಲಿ 200 ರನ್ ಸಿಡಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಐಪಿಎಲ್ ಟೂರ್ನಿಯಲ್ಲಿ ಏನು ಪ್ರದರ್ಶನ ತೋರಿದ್ದಾರೋ ಅದು ಸಿಹಿಯಾದ ಕೇಕ್ ಮೇಲೆ ಚೆಲ್ಲಿರುವ ಐಸ್ ಕ್ರೀಮ್ ರೀತಿ ಇದೆ. ಆದ್ದರಿಂದ ಯುವ ಪ್ರತಿಭೆಗೆ ಭಾರತ ತಂಡದಲ್ಲಿ 3 ಸ್ವರೂಪದಲ್ಲೂ ಅವಕಾಶ ಕಲ್ಪಿಸಬೇಕು” ಎಂದು ಗೌತಮ್ ಗಂಭೀರ್ ಶ್ಲಾಘಿಸಿದ್ದಾರೆ.

ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಎ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ಪರ ಕಾಣಿಸಿಕೊಂಡಿದ್ದ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿದ್ದಾರೆ. ಅಲ್ಲದೆ ರಣಜಿ ಟೂರ್ನಿಯಲ್ಲಿ ಅತ್ಯಮೋಘ 315 ರನ್ ಬಾರಿಸಿದ್ದು, ಇರಾನಿ ಟ್ರೋಫಿಯಲ್ಲೂ ಶತಕ ಸಂಭ್ರಮ ಕಂಡಿದ್ದಾರೆ.

2023ನೇ ಸಾಲಿನ ಐಪಿಎಲ್ ಟೂರ್ನಿಯಲ್ಲೂ ರನ್ ಹೊಳೆ ಹರಿಸಿರುವ ಯಶಸ್ವಿ ಜೈಸ್ವಾಲ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 13 ಎಸೆತಗಳಲ್ಲೇ ವೇಗದ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. 163.61 ಸರಾಸರಿಯಲ್ಲಿ 14 ಪಂದ್ಯಗಳಿಂದ 625 ಬಾರಿಸಿದ್ದಾರೆ.

21 ವರ್ಷದ ಯುವ ಆಟಗಾರ 15 ಪ್ರಥಮ ದರ್ಜೆ ಪಂದ್ಯಗಳಿಂದ 80.21 ಸರಾಸರಿಯಲ್ಲಿ 1845 ರನ್ ಬಾರಿಸಿದ್ದರೆ, 32 ಲೀಸ್ಟ್ ಎ ಪಂದ್ಯಗಳಿಂದ 53.96 ಸರಾಸರಿಯಲ್ಲಿ 1511 ರನ್ ಚಚ್ಚಿದ್ದಾರೆ. ರೆಡ್ ಬಾಲ್ ಸ್ವರೂಪದಲ್ಲಿ 9 ಸೆಂಚುರಿ, ಲೀಸ್ಟ್ ಎ ಪಂದ್ಯಗಳಲ್ಲಿ 5 ಶತಕ ಬಾರಿಸಿರುವ ಯಶಸ್ವಿ ಜೈಸ್ವಾಲ್, ಜುಲೈ 12 ರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ಭರವಸೆ ಮೂಡಿಸಿದ್ದಾರೆ. ಭಾರತ ತಂಡವು ಕೆರಿಬಿಯನ್ ನಾಡಿನಲ್ಲಿ 2 ಟೆಸ್ಟ್, 3 ಏಕದಿನ ಮತ್ತು 5 ಟಿ 20 ಪಂದ್ಯಗಳ ಸರಣಿಗಳನ್ನು ಆಡಲಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

14 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

22 hours ago