ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ವಿಕೇಟ್ ಕೀಪರ್ ಬ್ಯಾಟ್ಸ್ಮನ್ ಹೆನ್ರಿಚ್ ಕ್ಲಾಸೆನ್ ಟೆಸ್ಟ್ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ೩೨ ವರ್ಷದ ಅನುಭವಿ ಬ್ಯಾಟರ್ ಕ್ಲಾಸೆನ್ ವೈಟ್ ಬಾಲ್ ಕ್ರಿಕೆಟ್ಗೆ ಹೆಚ್ಚಿನ ಗಮನ ನೀಡುವ ಉದ್ದೇಶದಿಂದ ಟೆಸ್ಟ್ಗೆ ನಿವೃತ್ತಿ ಹೇಳಿದ್ದಾರೆ.
೨೦೧೯ ರಿಂದ ೨೦೨೩ ವರೆಗೆ ದಕ್ಷಿಣ ಆಫ್ರಿಕಾ ಪರವಾಗಿ ಕೇವಲ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿರುವ ಕ್ಲಾಸಿನ್ ಕೊನೆಯದಾಗಿ ವೆಸ್ಟ್ ಇಂಡೀಸ್ ವಿರುದ್ಧ ರೆಡ್ ಬಾಲ್ನಲ್ಲಿ ಕಣಕ್ಕಿಳಿದಿದ್ದರು. ಎರಡು ಪಂದ್ಯಗಳಿಂದ ನಾಲ್ಕು ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡದ್ದ ಅವರು ಕೇವಲ ೫೬ ರನ್ ಗಳಿಸಿದ್ದರು. ಇತ್ತೀಚೆಗೆ ಹರಿಣ ಪಡೆಯ ಆರಂಭಿಕ ಆಟಗಾರ ಡೀನ್ ಎಲ್ಗರ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ ಕೆಲವೇ ದಿನಗಳ ಬಳಿಕ ಕ್ಲಾಸೆನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಕಳಪೆ ಫಾರ್ಮನಿಂದಾಗಿ ಕ್ಲಾಸೆನ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟು ಯುವ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಕೈಲ್ ವೆರ್ರೇಯ್ನ್ ಅವರಿಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಮುಂಬರುವ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ಸರಣಿಗೆ ಕ್ಲಾಸೆನ್ ಅವರನ್ನು ಪರಿಗಣಿಸಲಾಗುವುದು ಎಂದು ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್ ಹೇಳಿಕೊಂಡಿದ್ದರು. ಆದರೆ ಇದ್ಯಾವುದನ್ನು ಲೆಕ್ಕಿಸದೇ ಕ್ಲಾಸೆನ್ ಹಠಾತ್ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.
“ಹಲವು ರಾತ್ರಿಗಳನ್ನು ನಿದ್ರೆ ಇಲ್ಲದೆ ಕಳೆದ ಬಳಿಕ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಹೇಳುತ್ತಿದ್ದೇನೆ. ಇದೊಂದು ಅತ್ಯಂತ ಕಠಿಣ ನಿರ್ಧಾರ ಆಗಿತ್ತು. ಏಕೆಂದರೆ ರೆಡ್ ಬಾಲ್ ಕ್ರಿಕೆಟ್ ನನ್ನ ಅಚ್ಚುಮೆಚ್ಚಿನ ಆಟ. ಇದೊಂದು ಅದ್ಭುತ ಪಯಣ, ಇದರಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವುದಕ್ಕೆ ಬಹಳ ಹೆಮ್ಮೆಯಿದೆ. ನನ್ನ ಬ್ಯಾಗಿ ಟೆಸ್ಟ್ ಕ್ಯಾಪ್ ಬಹಳಾ ವಿಶೇಷವಾದುದ್ದು,” ಎಂದು ಹೆನ್ರಿಚ್ ಕ್ಲಾಸೆನ್ ನಿವೃತ್ತಿಯಾಗುತ್ತಿರುವ ಬಗ್ಗೆ ಬರೆದುಕೊಂಡಿದ್ದಾರೆ.
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…