ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್‌ ನಿವೃತ್ತಿ ಘೋಷಿಸಿದ ಹೆನ್ರಿಚ್‌ ಕ್ಲಾಸೆನ್‌!

ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ವಿಕೇಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹೆನ್ರಿಚ್‌ ಕ್ಲಾಸೆನ್‌ ಟೆಸ್ಟ್‌ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಣೆ ಮಾಡಿದ್ದಾರೆ. ೩೨ ವರ್ಷದ ಅನುಭವಿ ಬ್ಯಾಟರ್‌ ಕ್ಲಾಸೆನ್‌ ವೈಟ್‌ ಬಾಲ್‌ ಕ್ರಿಕೆಟ್‌ಗೆ ಹೆಚ್ಚಿನ ಗಮನ ನೀಡುವ ಉದ್ದೇಶದಿಂದ ಟೆಸ್ಟ್‌ಗೆ ನಿವೃತ್ತಿ ಹೇಳಿದ್ದಾರೆ.

೨೦೧೯ ರಿಂದ ೨೦೨೩ ವರೆಗೆ ದಕ್ಷಿಣ ಆಫ್ರಿಕಾ ಪರವಾಗಿ ಕೇವಲ ನಾಲ್ಕು ಟೆಸ್ಟ್‌ ಪಂದ್ಯಗಳನ್ನು ಆಡಿರುವ ಕ್ಲಾಸಿನ್‌ ಕೊನೆಯದಾಗಿ ವೆಸ್ಟ್ ಇಂಡೀಸ್‌ ವಿರುದ್ಧ ರೆಡ್‌ ಬಾಲ್‌ನಲ್ಲಿ ಕಣಕ್ಕಿಳಿದಿದ್ದರು. ಎರಡು ಪಂದ್ಯಗಳಿಂದ ನಾಲ್ಕು ಇನ್ನಿಂಗ್ಸ್‌ ನಲ್ಲಿ ಬ್ಯಾಟಿಂಗ್‌ ಮಾಡದ್ದ ಅವರು ಕೇವಲ ೫೬ ರನ್‌ ಗಳಿಸಿದ್ದರು. ಇತ್ತೀಚೆಗೆ ಹರಿಣ ಪಡೆಯ ಆರಂಭಿಕ ಆಟಗಾರ ಡೀನ್‌ ಎಲ್ಗರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ಕೆಲವೇ ದಿನಗಳ ಬಳಿಕ ಕ್ಲಾಸೆನ್‌ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಕಳಪೆ ಫಾರ್ಮನಿಂದಾಗಿ ಕ್ಲಾಸೆನ್‌ ಅವರನ್ನು ಟೆಸ್ಟ್‌ ತಂಡದಿಂದ ಕೈಬಿಟ್ಟು ಯುವ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಕೈಲ್ ವೆರ್ರೇಯ್ನ್‌ ಅವರಿಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಮುಂಬರುವ ವೆಸ್ಟ್‌ ಇಂಡೀಸ್‌ ಮತ್ತು ಬಾಂಗ್ಲಾದೇಶ ಸರಣಿಗೆ ಕ್ಲಾಸೆನ್‌ ಅವರನ್ನು ಪರಿಗಣಿಸಲಾಗುವುದು ಎಂದು ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್‌ ಹೇಳಿಕೊಂಡಿದ್ದರು. ಆದರೆ ಇದ್ಯಾವುದನ್ನು ಲೆಕ್ಕಿಸದೇ ಕ್ಲಾಸೆನ್‌ ಹಠಾತ್‌ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.

“ಹಲವು ರಾತ್ರಿಗಳನ್ನು ನಿದ್ರೆ ಇಲ್ಲದೆ ಕಳೆದ ಬಳಿಕ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿದ್ದೇನೆ. ಇದೊಂದು ಅತ್ಯಂತ ಕಠಿಣ ನಿರ್ಧಾರ ಆಗಿತ್ತು. ಏಕೆಂದರೆ ರೆಡ್‌ ಬಾಲ್‌ ಕ್ರಿಕೆಟ್‌ ನನ್ನ ಅಚ್ಚುಮೆಚ್ಚಿನ ಆಟ. ಇದೊಂದು ಅದ್ಭುತ ಪಯಣ, ಇದರಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವುದಕ್ಕೆ ಬಹಳ ಹೆಮ್ಮೆಯಿದೆ. ನನ್ನ ಬ್ಯಾಗಿ ಟೆಸ್ಟ್ ಕ್ಯಾಪ್‌ ಬಹಳಾ ವಿಶೇಷವಾದುದ್ದು,” ಎಂದು ಹೆನ್ರಿಚ್ ಕ್ಲಾಸೆನ್‌ ನಿವೃತ್ತಿಯಾಗುತ್ತಿರುವ ಬಗ್ಗೆ ಬರೆದುಕೊಂಡಿದ್ದಾರೆ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

3 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

9 hours ago