ಕ್ರೀಡೆ

ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾದ ಕ್ರೀಡಾಪಟುಗಳ ವಿವರ ಇಲ್ಲಿದೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ಹಿರಿಯ ನಾಯಕರು, ಸೆಲೆಬ್ರೆಟಿಸ್‌, ಕ್ರೀಡಾಪಟುಗಳ ಸಹಿತ ಸುಮಾರು 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.

ಕ್ರೀಡಾ ದಿಗ್ಗಜರಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್, ‘ಸ್ಪ್ರಿಂಟ್ ಕ್ವೀನ್’ ಪಿಟಿ ಉಷಾ ಮತ್ತು ಸ್ಟಾರ್ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ ಸೇರಿದಂತೆ ಅನೇಕ ಸ್ಟಾರ್ ಆಟಗಾರರಿಗೆ ಆಹ್ವಾನಿಸಲಾಗಿದೆ.

ರಾಮಮಂದಿರ ಉದ್ಘಾಟನೆಗೆ ಆಹ್ವಾನಿತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ:
ಸಚಿನ್ ತೆಂಡೂಲ್ಕರ್
ಎಂಎಸ್ ಧೋನಿ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ
ಸುನಿಲ್ ಗವಾಸ್ಕರ್
ಕಪಿಲ್ ದೇವ್
ರಾಹುಲ್ ದ್ರಾವಿಡ್
ವೀರೇಂದ್ರ ಸೆಹ್ವಾಗ್
ಸೌರವ್ ಗಂಗೂಲಿ
ಅನಿಲ್ ಕುಂಬ್ಳೆ
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಮಿಥಾಲಿ ರಾಜ್
ಹರ್ಮನ್‌ಪ್ರೀತ್ ಕೌರ್
ಗೌತಮ್ ಗಂಭೀರ್
ಹರ್ಭಜನ್ ಸಿಂಗ್

ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಟೀಮ್ ಇಂಡಿಯಾದ ಯಾವೆಲ್ಲಾ ಆಟಗಾರರು ಅಯೋಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಯಾವೆಲ್ಲಾ ಆಟಗಾರರು ಬರುವುದಿಲ್ಲ ಎಂಬುದನ್ನು ನೋಡಬೇಕಿದೆ.

ವಿವಿಧ ಕ್ರೀಡಾ ಆಟಗಾರರ ಪಟ್ಟಿ: ಕ್ರಿಕೆಟ್‌ ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಹರ್ಮನ್​ಪ್ರೀತ್ ಕೌರ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್‌ಗೆ ಆಹ್ವಾನ ನೀಡಲಾಗಿದೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

11 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

12 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

12 hours ago