ಕ್ರೀಡೆ

ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾದ ಕ್ರೀಡಾಪಟುಗಳ ವಿವರ ಇಲ್ಲಿದೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ಹಿರಿಯ ನಾಯಕರು, ಸೆಲೆಬ್ರೆಟಿಸ್‌, ಕ್ರೀಡಾಪಟುಗಳ ಸಹಿತ ಸುಮಾರು 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.

ಕ್ರೀಡಾ ದಿಗ್ಗಜರಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್, ‘ಸ್ಪ್ರಿಂಟ್ ಕ್ವೀನ್’ ಪಿಟಿ ಉಷಾ ಮತ್ತು ಸ್ಟಾರ್ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ ಸೇರಿದಂತೆ ಅನೇಕ ಸ್ಟಾರ್ ಆಟಗಾರರಿಗೆ ಆಹ್ವಾನಿಸಲಾಗಿದೆ.

ರಾಮಮಂದಿರ ಉದ್ಘಾಟನೆಗೆ ಆಹ್ವಾನಿತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ:
ಸಚಿನ್ ತೆಂಡೂಲ್ಕರ್
ಎಂಎಸ್ ಧೋನಿ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ
ಸುನಿಲ್ ಗವಾಸ್ಕರ್
ಕಪಿಲ್ ದೇವ್
ರಾಹುಲ್ ದ್ರಾವಿಡ್
ವೀರೇಂದ್ರ ಸೆಹ್ವಾಗ್
ಸೌರವ್ ಗಂಗೂಲಿ
ಅನಿಲ್ ಕುಂಬ್ಳೆ
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಮಿಥಾಲಿ ರಾಜ್
ಹರ್ಮನ್‌ಪ್ರೀತ್ ಕೌರ್
ಗೌತಮ್ ಗಂಭೀರ್
ಹರ್ಭಜನ್ ಸಿಂಗ್

ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಟೀಮ್ ಇಂಡಿಯಾದ ಯಾವೆಲ್ಲಾ ಆಟಗಾರರು ಅಯೋಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಯಾವೆಲ್ಲಾ ಆಟಗಾರರು ಬರುವುದಿಲ್ಲ ಎಂಬುದನ್ನು ನೋಡಬೇಕಿದೆ.

ವಿವಿಧ ಕ್ರೀಡಾ ಆಟಗಾರರ ಪಟ್ಟಿ: ಕ್ರಿಕೆಟ್‌ ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಹರ್ಮನ್​ಪ್ರೀತ್ ಕೌರ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್‌ಗೆ ಆಹ್ವಾನ ನೀಡಲಾಗಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

5 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

5 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

8 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

8 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 hours ago