ಕ್ರೀಡೆ

2023ರ ವಿಶ್ವಕಪ್‌ ಆವೃತ್ತಿಯಲ್ಲಿನ ಅನಿರೀಕ್ಷಿತ ಫಲಿತಾಂಶಗಳಿವು

ವಿಶ್ವಕಪ್‌ 2023ರಲ್ಲಿ ಹಲವು ದಾಖಲೆ, ಇಂಪ್ಯಾಕ್ಟ್‌, ರೋಚಕ ಪಂದ್ಯಗಳು ನಡೆದಿವೆ. ಅದರಲ್ಲಿಯೂ ಅನಿರೀಕ್ಷಿತ ಘಟನೆಗಳು ಸಂಭವಿಸಿದ್ದು, ಅವುಗಳ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ.

ಈ ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ ಕಳೆದ ಬಾರಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವು ಯಾರು ಊಹಿಸದ ರೀತಿ ಲೀಗ್‌ ಹಂತದಲ್ಲಿಯೇ ಹೊರಬಿದ್ದಿತು. ತಾನಾಡಿದ 9 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಲನ್ನು ಗೆದ್ದು, 6 ಪಂದ್ಯಗಳಲ್ಲಿ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿತು.

ಶ್ರೀಲಂಕಾ ತಂಡ ಎಷ್ಯಾ ಕಪ್‌ ಹಾಗೂ ವಿಶ್ವಕಪ್‌ ನಲ್ಲಿ ತೋರಿದ ಕಳಪೆ ಪ್ರದರ್ಶನದಿಂದಾಗಿ ಐಸಿಸಿ ಶ್ರೀಲಂಕಾ ತಂಡವನ್ನು ಚಾಂಪಿಯನ್ಸ್‌ ಟ್ರೋಫಿಯಿಂದ ಅಮಾನತುಗೊಳಿಸಿತು. 9ಪಂದ್ಯಗಳಲ್ಲಿ ಕೇವಲ 2ರಲ್ಲಿ ಗೆದ್ದು ಮುಖಭಂಗ ಅನುಭವಿಸಿತು.

ನೆದರ್‌ಲೆಂಡ್‌ ಹಾಗೂ ಅಫ್ಘಾನಿಸ್ತಾನ ತಂಡಗಳೆರೆಡು ಉತ್ತಮ ಪ್ರದರ್ಶನ ತೋರಿದವು. ಈ ಎರಡು ತಂಡಗಳು ಕನಿಷ್ಠ 2 ಪಂದ್ಯ ಗೆಲ್ಲುವ ಮೂಲಕ 2024ರ ಟಿ20 ವಿಶ್ವಕಪ್‌ಗೆ ನೇರ ಆಯ್ಕೆಯಾಗಿವೆ.

ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮೊಟ್ಟ ಮೊದಲ ಬಾರಿಗೆ ನೆದರ್‌ಲೆಂಡ್‌ ತಂಡ ಸೋಲಿಸಿದ್ದು, ಈ ಬಾರಿ ವಿಶೇಷವಾಗಿದೆ. ಮೊದಲು ಬ್ಯಾಟ್‌ ಮಾಡಿದ ನೆದರ್‌ಲೆಂಡ್‌ 245/8 ಕಲೆಹಾಕಿತು. ಇದನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಆಲ್‌ಔಟ್‌ ಆಗಿ ಕೇವಲ 207ರನ್‌ಗಳಿಸಿ 38 ರನ್‌ಗಳಿಂದ ಸೋಲನುಭವಿಸಿತು.

ಅಫ್ಘಾನಿಸ್ತಾನ ತಂಡ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಮತ್ತೊಮ್ಮೆ ಪಾಕ್‌ಗೆ ಕಂಠಕವಾಗಿದ್ದಾರೆ. ಪಾಕ್‌ ನೀಡಿದ 282ರನ್‌ಗಳ ಗುರಿಯನ್ನು ಕೇವಲ 2 ವಿಕೆಟ್‌ ಕಳೆದುಕೊಂಡು ಮುಟ್ಟುವ ಮೂಲಕ ಪಾಕ್‌ ಸೆಮಿಸ್‌ ಕನಸನ್ನು ನುಚ್ಚುನೂರು ಗೊಳಿಸಿತು.

ಜತೆಗೆ ಅಫ್ಘಾನ್‌ 69ರನ್‌ಗಳಿಂದ ಇಂಗ್ಲೆಂಡ್‌ ತಂಡವನ್ನು ಮಣಿಸುವ ಮೂಲಕ 2019ರ ಸೋಲಿಗೆ ಸೇಡು ತೀರಿಸಿಕೊಂಡಿತು.

andolanait

Recent Posts

ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.…

40 seconds ago

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

9 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

13 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago