ಕ್ರೀಡೆ

ಹಾಕಿ ಫೈವ್ಸ್ ಏಶ್ಯಕಪ್: ಪಾಕಿಸ್ತಾನ ಸೋಲಿಸಿ ಪ್ರಶಸ್ತಿ ಗೆದ್ದ ಭಾರತ

ನವದೆಹಲಿ : ಪುರುಷರ ಹಾಕಿ ಫೈವ್ಸ್ ಏಶ್ಯಕಪ್ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸುವುದರೊಂದಿಗೆ ಪ್ರಶಸ್ತಿ ಎತ್ತಿ ಹಿಡಿದಿದೆ.

ಒಮಾನ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಉಭಯ ತಂಡಗಳು 4-4ರಿಂದ ಸಮಬಲ ಸಾಧಿಸಿದ್ದವು. ನಂತರ ಪೆನಾಲ್ಟಿ ಶೂಟೌಟ್‌ನಲ್ಲಿ ಪಾಕ್ ತಂಡವನ್ನು ಭಾರತವು 2-0 ಅಂತರದಿಂದ ಸೋಲಿಸಿತು. ಇದರೊಂದಿಗೆ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಭಾರತದ ಪರ ಮುಹಮ್ಮದ್ ರಾಹಿಲ್(19ನೇ, 26ನೇ ನಿಮಿಷ), ಜುಗ್‌ರಾಜ್ ಸಿಂಗ್(7ನೇ ನಿ.)ಹಾಗೂ ಮಣಿಂದರ್ ಸಿಂಗ್(10ನೇ ನಿ.)ಗೋಲು ಗಳಿಸಿದ್ದಾರೆ. ಗುರ್ಜೋತ್ ಸಿಂಗ್ ಹಾಗೂ ಮಣಿಂದರ್ ಶೂಟೌಟ್‌ನಲ್ಲಿ ಗೋಲು ಗಳಿಸಿದರು.

ಹಾಕಿ ಫೈವ್ಸ್ ಏಶ್ಯಕಪ್‌ನಲ್ಲಿ ಗೆಲುವು ಸಾಧಿಸಿದ ಭಾರತದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ಇದು ನಮ್ಮ ಆಟಗಾರರ ಅಚಲ ಸಮರ್ಪಣೆಗೆ ಸಾಕ್ಷಿಯಾಗಿದೆ. ಈ ಗೆಲುವಿನೊಂದಿಗೆ ಮುಂದಿನ ವರ್ಷ ಒಮಾನ್‌ನಲ್ಲಿ ನಡೆಯುವ ಹಾಕಿ ಫೈವ್ಸ್ ವಿಶ್ವಕಪ್‌ಗೆ ಅರ್ಹತೆ ಪಡೆದಿದ್ದೇವೆ. ಹಾಕಿ ಆಟಗಾರರ ದೃಢತೆ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago