ಕ್ರೀಡೆ

ಹಾಕಿ| ಜೂನಿಯರ್‌ ಏಷ್ಯಾಕಪ್‌: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

13ನೇ ನಿಮಿಷದಲ್ಲಿ ಅಂಗದ್‌ ಬೀರ್‌ ಸಿಂಗ್‌, 20ನೇ ನಿಮಿಷದಲ್ಲಿ ಅರೈಜೀತ್‌ ಸಿಂಗ್‌ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್‌ ಅಕ್ರಮಣವನ್ನು ತಡೆದು ನಿಂತ ಗೋಲ್‌ಕೀಪರ್‌ ಶಶಿಕುಮಾರ್‌ ಮೋಹಿತ್‌ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.

ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್‌ ಏಷ್ಯಾ ಕಪ್‌ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್‌ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).

ಅಜೇಯ ಅಭಿಯಾನ: ಉತ್ತಮ್‌ ಸಿಂಗ್‌ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್‌ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್‌ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್‌ ಸಿಂಗ್‌ ಪ್ರತಿಕ್ರಿಯೆ.

ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್‌ ಸಿ.ಆರ್‌. ಕುಮಾರ್‌ ಹೇಳಿದರು. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.

ವಿಶ್ವಕಪ್‌ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್‌ಐಎಚ್‌ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್‌ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಭಾರತೀಯ ಹಾಕಿ ಫೆಡರೇಶನ್‌ ಅಧ್ಯಕ್ಷ ದಿಲೀಪ್‌ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್‌ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್‌ ಆಫ್‌ ಜೊಹರ್‌ ಕಪ್‌ ಬಳಿಕ ತಂಡದಲ್ಲಿ ಹೊಸ ಜೋಶ್‌ ತುಂಬಿದೆ. ವಿಶ್ವಕಪ್‌ನಲ್ಲೂ ಚಾಂಪಿಯನ್‌ ಆಗುವ ನಂಬಿಕೆ ಇದೆ’ ಎಂದಿದ್ದಾರೆ.

andolanait

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

31 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago