ಸಲಾಲ (ಒಮಾನ್): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್ ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
13ನೇ ನಿಮಿಷದಲ್ಲಿ ಅಂಗದ್ ಬೀರ್ ಸಿಂಗ್, 20ನೇ ನಿಮಿಷದಲ್ಲಿ ಅರೈಜೀತ್ ಸಿಂಗ್ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್ ಅಕ್ರಮಣವನ್ನು ತಡೆದು ನಿಂತ ಗೋಲ್ಕೀಪರ್ ಶಶಿಕುಮಾರ್ ಮೋಹಿತ್ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.
ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್ ಏಷ್ಯಾ ಕಪ್ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).
ಅಜೇಯ ಅಭಿಯಾನ: ಉತ್ತಮ್ ಸಿಂಗ್ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್ ಸಿಂಗ್ ಪ್ರತಿಕ್ರಿಯೆ.
ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್ ಸಿ.ಆರ್. ಕುಮಾರ್ ಹೇಳಿದರು. ಸೆಮಿಫೈನಲ್ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.
ವಿಶ್ವಕಪ್ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್ಐಎಚ್ ಜೂನಿಯರ್ ವಿಶ್ವಕಪ್ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.
ಭಾರತೀಯ ಹಾಕಿ ಫೆಡರೇಶನ್ ಅಧ್ಯಕ್ಷ ದಿಲೀಪ್ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್ ಆಫ್ ಜೊಹರ್ ಕಪ್ ಬಳಿಕ ತಂಡದಲ್ಲಿ ಹೊಸ ಜೋಶ್ ತುಂಬಿದೆ. ವಿಶ್ವಕಪ್ನಲ್ಲೂ ಚಾಂಪಿಯನ್ ಆಗುವ ನಂಬಿಕೆ ಇದೆ’ ಎಂದಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…