ಕ್ರೀಡೆ

ಹಾಕಿ| ಜೂನಿಯರ್‌ ಏಷ್ಯಾಕಪ್‌: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

13ನೇ ನಿಮಿಷದಲ್ಲಿ ಅಂಗದ್‌ ಬೀರ್‌ ಸಿಂಗ್‌, 20ನೇ ನಿಮಿಷದಲ್ಲಿ ಅರೈಜೀತ್‌ ಸಿಂಗ್‌ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್‌ ಅಕ್ರಮಣವನ್ನು ತಡೆದು ನಿಂತ ಗೋಲ್‌ಕೀಪರ್‌ ಶಶಿಕುಮಾರ್‌ ಮೋಹಿತ್‌ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.

ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್‌ ಏಷ್ಯಾ ಕಪ್‌ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್‌ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).

ಅಜೇಯ ಅಭಿಯಾನ: ಉತ್ತಮ್‌ ಸಿಂಗ್‌ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್‌ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್‌ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್‌ ಸಿಂಗ್‌ ಪ್ರತಿಕ್ರಿಯೆ.

ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್‌ ಸಿ.ಆರ್‌. ಕುಮಾರ್‌ ಹೇಳಿದರು. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.

ವಿಶ್ವಕಪ್‌ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್‌ಐಎಚ್‌ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್‌ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಭಾರತೀಯ ಹಾಕಿ ಫೆಡರೇಶನ್‌ ಅಧ್ಯಕ್ಷ ದಿಲೀಪ್‌ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್‌ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್‌ ಆಫ್‌ ಜೊಹರ್‌ ಕಪ್‌ ಬಳಿಕ ತಂಡದಲ್ಲಿ ಹೊಸ ಜೋಶ್‌ ತುಂಬಿದೆ. ವಿಶ್ವಕಪ್‌ನಲ್ಲೂ ಚಾಂಪಿಯನ್‌ ಆಗುವ ನಂಬಿಕೆ ಇದೆ’ ಎಂದಿದ್ದಾರೆ.

andolanait

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

2 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

2 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

3 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

3 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

4 hours ago