ಕ್ರೀಡೆ

ಹಾಕಿ| ಜೂನಿಯರ್‌ ಏಷ್ಯಾಕಪ್‌: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

13ನೇ ನಿಮಿಷದಲ್ಲಿ ಅಂಗದ್‌ ಬೀರ್‌ ಸಿಂಗ್‌, 20ನೇ ನಿಮಿಷದಲ್ಲಿ ಅರೈಜೀತ್‌ ಸಿಂಗ್‌ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್‌ ಅಕ್ರಮಣವನ್ನು ತಡೆದು ನಿಂತ ಗೋಲ್‌ಕೀಪರ್‌ ಶಶಿಕುಮಾರ್‌ ಮೋಹಿತ್‌ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.

ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್‌ ಏಷ್ಯಾ ಕಪ್‌ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್‌ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).

ಅಜೇಯ ಅಭಿಯಾನ: ಉತ್ತಮ್‌ ಸಿಂಗ್‌ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್‌ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್‌ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್‌ ಸಿಂಗ್‌ ಪ್ರತಿಕ್ರಿಯೆ.

ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್‌ ಸಿ.ಆರ್‌. ಕುಮಾರ್‌ ಹೇಳಿದರು. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.

ವಿಶ್ವಕಪ್‌ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್‌ಐಎಚ್‌ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್‌ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಭಾರತೀಯ ಹಾಕಿ ಫೆಡರೇಶನ್‌ ಅಧ್ಯಕ್ಷ ದಿಲೀಪ್‌ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್‌ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್‌ ಆಫ್‌ ಜೊಹರ್‌ ಕಪ್‌ ಬಳಿಕ ತಂಡದಲ್ಲಿ ಹೊಸ ಜೋಶ್‌ ತುಂಬಿದೆ. ವಿಶ್ವಕಪ್‌ನಲ್ಲೂ ಚಾಂಪಿಯನ್‌ ಆಗುವ ನಂಬಿಕೆ ಇದೆ’ ಎಂದಿದ್ದಾರೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

4 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

6 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago