ಕ್ರೀಡೆ

ಹಾಕಿ| ಜೂನಿಯರ್‌ ಏಷ್ಯಾಕಪ್‌: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

13ನೇ ನಿಮಿಷದಲ್ಲಿ ಅಂಗದ್‌ ಬೀರ್‌ ಸಿಂಗ್‌, 20ನೇ ನಿಮಿಷದಲ್ಲಿ ಅರೈಜೀತ್‌ ಸಿಂಗ್‌ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್‌ ಅಕ್ರಮಣವನ್ನು ತಡೆದು ನಿಂತ ಗೋಲ್‌ಕೀಪರ್‌ ಶಶಿಕುಮಾರ್‌ ಮೋಹಿತ್‌ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.

ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್‌ ಏಷ್ಯಾ ಕಪ್‌ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್‌ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).

ಅಜೇಯ ಅಭಿಯಾನ: ಉತ್ತಮ್‌ ಸಿಂಗ್‌ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್‌ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್‌ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್‌ ಸಿಂಗ್‌ ಪ್ರತಿಕ್ರಿಯೆ.

ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್‌ ಸಿ.ಆರ್‌. ಕುಮಾರ್‌ ಹೇಳಿದರು. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.

ವಿಶ್ವಕಪ್‌ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್‌ಐಎಚ್‌ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್‌ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಭಾರತೀಯ ಹಾಕಿ ಫೆಡರೇಶನ್‌ ಅಧ್ಯಕ್ಷ ದಿಲೀಪ್‌ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್‌ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್‌ ಆಫ್‌ ಜೊಹರ್‌ ಕಪ್‌ ಬಳಿಕ ತಂಡದಲ್ಲಿ ಹೊಸ ಜೋಶ್‌ ತುಂಬಿದೆ. ವಿಶ್ವಕಪ್‌ನಲ್ಲೂ ಚಾಂಪಿಯನ್‌ ಆಗುವ ನಂಬಿಕೆ ಇದೆ’ ಎಂದಿದ್ದಾರೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

55 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

59 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago