ಕ್ರೀಡೆ

ಹಾಕಿ| ಜೂನಿಯರ್‌ ಏಷ್ಯಾಕಪ್‌: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

13ನೇ ನಿಮಿಷದಲ್ಲಿ ಅಂಗದ್‌ ಬೀರ್‌ ಸಿಂಗ್‌, 20ನೇ ನಿಮಿಷದಲ್ಲಿ ಅರೈಜೀತ್‌ ಸಿಂಗ್‌ ಬಾರಿಸಿದ ಗೋಲು ಭಾರತದ ಪಾಲಿಗೆ ವರವಾಗಿ ಪರಣಮಿಸಿತು. ಹಾಗೆಯೇ ಪಾಕ್‌ ಅಕ್ರಮಣವನ್ನು ತಡೆದು ನಿಂತ ಗೋಲ್‌ಕೀಪರ್‌ ಶಶಿಕುಮಾರ್‌ ಮೋಹಿತ್‌ ಹೊನ್ನೇನಹಳ್ಳಿ ಕೂಡ ಪಂದ್ಯದ ಹೀರೋ ಎನಿಸಿದರು.

ಈ ಜಯದೊಂದಿಗೆ ಭಾರತ ಸರ್ವಾಧಿಕ 4 ಸಲ ಜೂನಿಯರ್‌ ಏಷ್ಯಾ ಕಪ್‌ ಪ್ರಶಸ್ತಿ ಜಯಿಸಿದಂತಾಯಿತು. ಇದಕ್ಕೂ ಮುನ್ನ 2004, 2008 ಮತ್ತು 2015ರಲ್ಲಿ ಚಾಂಪಿಯನ್‌ ಆಗಿತ್ತು. ಪಾಕಿಸ್ಥಾನ 3 ಸಲ ಪ್ರಶಸ್ತಿ ಜಯಿಸಿದೆ (1988, 1992 ಮತ್ತು 1996).

ಅಜೇಯ ಅಭಿಯಾನ: ಉತ್ತಮ್‌ ಸಿಂಗ್‌ ನಾಯಕತ್ವದ ಭಾರತ ಅಜೇಯವಾಗಿ ಈ ಕೂಟವನ್ನು ಮುಗಿಸಿತು. “ಪಾಕಿಸ್ಥಾನ ವಿರುದ್ಧದ ಲೀಗ್‌ ಪಂದ್ಯ 1-1ರಿಂದ ಡ್ರಾ ಆಗಿತ್ತು. ಅಲ್ಲಿನ ಕೊರತೆಗಳನ್ನು ಫೈನಲ್‌ನಲ್ಲಿ ನೀಗಿಸಿಕೊಳ್ಳುವುದು ನಮ್ಮ ಯೋಜನೆ ಆಗಿತ್ತು. ಇದು ಯಶಸ್ವಿಯಾಯಿತು’ ಎಂಬುದು ಉತ್ತಮ್‌ ಸಿಂಗ್‌ ಪ್ರತಿಕ್ರಿಯೆ.

ಇದೊಂದು ತಂಡ ಪ್ರಯತ್ನ ಎಂಬುದಾಗಿ ಕೋಚ್‌ ಸಿ.ಆರ್‌. ಕುಮಾರ್‌ ಹೇಳಿದರು. ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 9-1 ಗೋಲುಗಳಿಂದ ಭರ್ಜರಿ ಯಾಗಿ ಮಣಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ನೆಗೆದಿತ್ತು.

ವಿಶ್ವಕಪ್‌ಗೆ ಆಯ್ಕೆ: ಈ ಸಾಧನೆಯಿಂದಾಗಿ ಭಾರತವೀಗ ಮಲೇಷ್ಯಾದಲ್ಲಿ ನಡೆಯುವ ಎಫ್‌ಐಎಚ್‌ ಜೂನಿಯರ್‌ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ಜತೆಗೆ ಭಾರತೀಯ ಹಾಕಿ ಫೆಡರೇಶನ್‌ ಪ್ರತೀ ಹಾಕಿ ಆಟಗಾರರಿಗೆ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.

ಭಾರತೀಯ ಹಾಕಿ ಫೆಡರೇಶನ್‌ ಅಧ್ಯಕ್ಷ ದಿಲೀಪ್‌ ತಿರ್ಕಿ ಕಿರಿಯರ ಸಾಧನೆಯನ್ನು ಕೊಂಡಾಡಿದ್ದಾರೆ. “ಜೂನಿಯರ್‌ ಹಾಕಿಪಟುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಸುಲ್ತಾನ್‌ ಆಫ್‌ ಜೊಹರ್‌ ಕಪ್‌ ಬಳಿಕ ತಂಡದಲ್ಲಿ ಹೊಸ ಜೋಶ್‌ ತುಂಬಿದೆ. ವಿಶ್ವಕಪ್‌ನಲ್ಲೂ ಚಾಂಪಿಯನ್‌ ಆಗುವ ನಂಬಿಕೆ ಇದೆ’ ಎಂದಿದ್ದಾರೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

15 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

15 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

16 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

16 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago