ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ ‘ಡಿ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದೆ.
ಭಾರತ ತಂಡವೀಗ ಭಾನುವಾರ ನಡೆಯಲಿರುವ ಕ್ರಾಸೋವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.
ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಭಾರತೀಯ ಆಟಗಾರರು ಚುರುಕಿನ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.
ಭಾರತದ ಪರ ಶಂಶೀರ್ ಸಿಂಗ್ (22ನೇ ನಿಮಿಷ), ಆಕಾಶ್ದೀಪ್ ಸಿಂಗ್ (33ನೇಮತ್ತು 46ನೇ ನಿಮಿಷ) ಮತ್ತು ಹರ್ಮನ್ಪ್ರೀತ್ ಸಿಂಗ್ (60ನೇ ನಿಮಿಷ) ವಿಜಯದ ಗೋಲುಗಳನ್ನು ಬಾರಿಸಿದರು.
ಮೊದಲಾರ್ಧದಲ್ಲಿ ಭಾರತ 1-0 ಗೋಲಿನ ಅಂತರದ ಮುನ್ನಡೆ ಕಾಯ್ದುಕೊಂಡಿತು. ಆದರೆ ಮೂರನೇ ಕ್ವಾರ್ಟರ್ನಲ್ಲಿ ತಿರುಗೇಟು ನೀಡಿದ ವೇಲ್ಸ್ 2-2ರ ಸಮಬಲ ಸಾಧಿಸಿತು. ನಾಲ್ಕನೇ ಹಾಗೂ ಅಂತಿಮ ಕ್ವಾರ್ಟರ್ನಲ್ಲಿ ಅಮೋಘ ಆಟವಾಡುವ ಮೂಲಕ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.
ಎರಡನೇ ಸ್ಥಾನದಲ್ಲಿ ಭಾರತ…
ಈ ಗೆಲುವಿನ ಹೊರತಾಗಿಯೂ ಭಾರತ ತಂಡವು ಡಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಗೋಲುಗಳ ಅಂತರದಲ್ಲಿ ಇಂಗ್ಲೆಂಡ್ ಭಾರತಕ್ಕಿಂತಲೂ ಮುನ್ನಡೆ ಕಾಯ್ದುಕೊಂಡಿದೆ.
ಈ ಮುನ್ನ ಸ್ಪೇನ್ ವಿರುದ್ಧ ಗೆಲುವು ದಾಖಲಿಸಿದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಡ್ರಾ ಫಲಿತಾಂಶ ದಾಖಲಿಸಿತ್ತು.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…