ಕ್ರೀಡೆ

Hockey World Cup: ವೇಲ್ಸ್ ವಿರುದ್ಧ ಭಾರತಕ್ಕೆ ಜಯ

ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ ‘ಡಿ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದೆ.

ಭಾರತ ತಂಡವೀಗ ಭಾನುವಾರ ನಡೆಯಲಿರುವ ಕ್ರಾಸೋವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.

ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಭಾರತೀಯ ಆಟಗಾರರು ಚುರುಕಿನ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.

ಭಾರತದ ಪರ ಶಂಶೀರ್ ಸಿಂಗ್ (22ನೇ ನಿಮಿಷ), ಆಕಾಶ್‌ದೀಪ್ ಸಿಂಗ್ (33ನೇಮತ್ತು 46ನೇ ನಿಮಿಷ) ಮತ್ತು ಹರ್ಮನ್‌ಪ್ರೀತ್ ಸಿಂಗ್ (60ನೇ ನಿಮಿಷ) ವಿಜಯದ ಗೋಲುಗಳನ್ನು ಬಾರಿಸಿದರು.

ಮೊದಲಾರ್ಧದಲ್ಲಿ ಭಾರತ 1-0 ಗೋಲಿನ ಅಂತರದ ಮುನ್ನಡೆ ಕಾಯ್ದುಕೊಂಡಿತು. ಆದರೆ ಮೂರನೇ ಕ್ವಾರ್ಟರ್‌ನಲ್ಲಿ ತಿರುಗೇಟು ನೀಡಿದ ವೇಲ್ಸ್ 2-2ರ ಸಮಬಲ ಸಾಧಿಸಿತು. ನಾಲ್ಕನೇ ಹಾಗೂ ಅಂತಿಮ ಕ್ವಾರ್ಟರ್‌ನಲ್ಲಿ ಅಮೋಘ ಆಟವಾಡುವ ಮೂಲಕ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.

ಎರಡನೇ ಸ್ಥಾನದಲ್ಲಿ ಭಾರತ…
ಈ ಗೆಲುವಿನ ಹೊರತಾಗಿಯೂ ಭಾರತ ತಂಡವು ಡಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಗೋಲುಗಳ ಅಂತರದಲ್ಲಿ ಇಂಗ್ಲೆಂಡ್ ಭಾರತಕ್ಕಿಂತಲೂ ಮುನ್ನಡೆ ಕಾಯ್ದುಕೊಂಡಿದೆ.

ಈ ಮುನ್ನ ಸ್ಪೇನ್ ವಿರುದ್ಧ ಗೆಲುವು ದಾಖಲಿಸಿದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಡ್ರಾ ಫಲಿತಾಂಶ ದಾಖಲಿಸಿತ್ತು.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago