ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ ‘ಡಿ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದೆ.
ಭಾರತ ತಂಡವೀಗ ಭಾನುವಾರ ನಡೆಯಲಿರುವ ಕ್ರಾಸೋವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.
ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಭಾರತೀಯ ಆಟಗಾರರು ಚುರುಕಿನ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.
ಭಾರತದ ಪರ ಶಂಶೀರ್ ಸಿಂಗ್ (22ನೇ ನಿಮಿಷ), ಆಕಾಶ್ದೀಪ್ ಸಿಂಗ್ (33ನೇಮತ್ತು 46ನೇ ನಿಮಿಷ) ಮತ್ತು ಹರ್ಮನ್ಪ್ರೀತ್ ಸಿಂಗ್ (60ನೇ ನಿಮಿಷ) ವಿಜಯದ ಗೋಲುಗಳನ್ನು ಬಾರಿಸಿದರು.
ಮೊದಲಾರ್ಧದಲ್ಲಿ ಭಾರತ 1-0 ಗೋಲಿನ ಅಂತರದ ಮುನ್ನಡೆ ಕಾಯ್ದುಕೊಂಡಿತು. ಆದರೆ ಮೂರನೇ ಕ್ವಾರ್ಟರ್ನಲ್ಲಿ ತಿರುಗೇಟು ನೀಡಿದ ವೇಲ್ಸ್ 2-2ರ ಸಮಬಲ ಸಾಧಿಸಿತು. ನಾಲ್ಕನೇ ಹಾಗೂ ಅಂತಿಮ ಕ್ವಾರ್ಟರ್ನಲ್ಲಿ ಅಮೋಘ ಆಟವಾಡುವ ಮೂಲಕ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.
ಎರಡನೇ ಸ್ಥಾನದಲ್ಲಿ ಭಾರತ…
ಈ ಗೆಲುವಿನ ಹೊರತಾಗಿಯೂ ಭಾರತ ತಂಡವು ಡಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಗೋಲುಗಳ ಅಂತರದಲ್ಲಿ ಇಂಗ್ಲೆಂಡ್ ಭಾರತಕ್ಕಿಂತಲೂ ಮುನ್ನಡೆ ಕಾಯ್ದುಕೊಂಡಿದೆ.
ಈ ಮುನ್ನ ಸ್ಪೇನ್ ವಿರುದ್ಧ ಗೆಲುವು ದಾಖಲಿಸಿದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಡ್ರಾ ಫಲಿತಾಂಶ ದಾಖಲಿಸಿತ್ತು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…