ಕ್ರೀಡೆ

Hockey World Cup: ವೇಲ್ಸ್ ವಿರುದ್ಧ ಭಾರತಕ್ಕೆ ಜಯ

ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ ‘ಡಿ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದೆ.

ಭಾರತ ತಂಡವೀಗ ಭಾನುವಾರ ನಡೆಯಲಿರುವ ಕ್ರಾಸೋವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.

ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಭಾರತೀಯ ಆಟಗಾರರು ಚುರುಕಿನ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.

ಭಾರತದ ಪರ ಶಂಶೀರ್ ಸಿಂಗ್ (22ನೇ ನಿಮಿಷ), ಆಕಾಶ್‌ದೀಪ್ ಸಿಂಗ್ (33ನೇಮತ್ತು 46ನೇ ನಿಮಿಷ) ಮತ್ತು ಹರ್ಮನ್‌ಪ್ರೀತ್ ಸಿಂಗ್ (60ನೇ ನಿಮಿಷ) ವಿಜಯದ ಗೋಲುಗಳನ್ನು ಬಾರಿಸಿದರು.

ಮೊದಲಾರ್ಧದಲ್ಲಿ ಭಾರತ 1-0 ಗೋಲಿನ ಅಂತರದ ಮುನ್ನಡೆ ಕಾಯ್ದುಕೊಂಡಿತು. ಆದರೆ ಮೂರನೇ ಕ್ವಾರ್ಟರ್‌ನಲ್ಲಿ ತಿರುಗೇಟು ನೀಡಿದ ವೇಲ್ಸ್ 2-2ರ ಸಮಬಲ ಸಾಧಿಸಿತು. ನಾಲ್ಕನೇ ಹಾಗೂ ಅಂತಿಮ ಕ್ವಾರ್ಟರ್‌ನಲ್ಲಿ ಅಮೋಘ ಆಟವಾಡುವ ಮೂಲಕ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.

ಎರಡನೇ ಸ್ಥಾನದಲ್ಲಿ ಭಾರತ…
ಈ ಗೆಲುವಿನ ಹೊರತಾಗಿಯೂ ಭಾರತ ತಂಡವು ಡಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಗೋಲುಗಳ ಅಂತರದಲ್ಲಿ ಇಂಗ್ಲೆಂಡ್ ಭಾರತಕ್ಕಿಂತಲೂ ಮುನ್ನಡೆ ಕಾಯ್ದುಕೊಂಡಿದೆ.

ಈ ಮುನ್ನ ಸ್ಪೇನ್ ವಿರುದ್ಧ ಗೆಲುವು ದಾಖಲಿಸಿದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಡ್ರಾ ಫಲಿತಾಂಶ ದಾಖಲಿಸಿತ್ತು.

 

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

10 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

11 hours ago