ಕ್ರೀಡೆ

ದೋನಿ, ವಿರಾಟ್‌ ಹಾಗೂ ರೋಹಿತ್‌ ನ ನಾಯತ್ವದಲ್ಲಿ ಗೆಲುವು ಎಷ್ಟು? ದಾಖಲೆ ಬರೆದಿದ್ದಾರ ರೋಹಿತ್‌..!

ಏಷ್ಯಾಕಪ್: ಏಷ್ಯಾಕಪ್​ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ ಭಾರತಕ್ಕೆ ಅತ್ಯಧಿಕ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರು. 50 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕಿಂಗ್ ಕೊಹ್ಲಿ 30 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ 30 ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ವಿರುದ್ದ ಗೆಲುವು ದಾಖಲಿಸಿದ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಪಾಕ್ ವಿರುದ್ದ ಟಿ20 ಕ್ರಿಕೆಟ್​ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ಭಾನುವಾರ ನಡೆದ ಪಂದ್ಯದಲ್ಲಿ ಗೆಲುವು ದಾಖಲಿಸುವ ರೋಹಿತ್ ಶರ್ಮಾ ಹೆಸರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದೆ.

36 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಕೇವಲ 6 ಪಂದ್ಯಗಳಲ್ಲಿ ಮಾತ್ರ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಹಿಟ್​ಮ್ಯಾನ್ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾಗೆ ಜಯ ತಂದುಕೊಟ್ಟಿದ್ದರು.

ಇನ್ನು ಟೀಮ್ ಇಂಡಿಯಾದ ಯಶಸ್ವಿ ಟಿ20 ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದು, ಧೋನಿ 72 ಪಂದ್ಯಗಳಲ್ಲಿ 41 ಜಯ ತಂದುಕೊಟ್ಟಿದ್ದರು. ಹಾಗೆಯೇ ಕೊಹ್ಲಿ 50 ಪಂದ್ಯಗಳಲ್ಲಿ 30 ಜಯ ಗೆಲುವು ದಾಖಲಿಸಿದರೆ, ರೋಹಿತ್ ಶರ್ಮಾ ಕೇವಲ 36 ಪಂದ್ಯಗಳಲ್ಲಿ 30 ಜಯ ತಂದುಕೊಡುವ ಮೂಲಕ ಟಿ20 ನಾಯಕತ್ವದಲ್ಲಿ ಮಿಂಚಿದ್ದಾರೆ.

andolana

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

15 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

19 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

55 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

2 hours ago