ಕ್ರೀಡೆ

ದೋನಿ, ವಿರಾಟ್‌ ಹಾಗೂ ರೋಹಿತ್‌ ನ ನಾಯತ್ವದಲ್ಲಿ ಗೆಲುವು ಎಷ್ಟು? ದಾಖಲೆ ಬರೆದಿದ್ದಾರ ರೋಹಿತ್‌..!

ಏಷ್ಯಾಕಪ್: ಏಷ್ಯಾಕಪ್​ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ ಭಾರತಕ್ಕೆ ಅತ್ಯಧಿಕ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರು. 50 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕಿಂಗ್ ಕೊಹ್ಲಿ 30 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ 30 ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ವಿರುದ್ದ ಗೆಲುವು ದಾಖಲಿಸಿದ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಪಾಕ್ ವಿರುದ್ದ ಟಿ20 ಕ್ರಿಕೆಟ್​ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ಭಾನುವಾರ ನಡೆದ ಪಂದ್ಯದಲ್ಲಿ ಗೆಲುವು ದಾಖಲಿಸುವ ರೋಹಿತ್ ಶರ್ಮಾ ಹೆಸರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದೆ.

36 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಕೇವಲ 6 ಪಂದ್ಯಗಳಲ್ಲಿ ಮಾತ್ರ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಹಿಟ್​ಮ್ಯಾನ್ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾಗೆ ಜಯ ತಂದುಕೊಟ್ಟಿದ್ದರು.

ಇನ್ನು ಟೀಮ್ ಇಂಡಿಯಾದ ಯಶಸ್ವಿ ಟಿ20 ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದು, ಧೋನಿ 72 ಪಂದ್ಯಗಳಲ್ಲಿ 41 ಜಯ ತಂದುಕೊಟ್ಟಿದ್ದರು. ಹಾಗೆಯೇ ಕೊಹ್ಲಿ 50 ಪಂದ್ಯಗಳಲ್ಲಿ 30 ಜಯ ಗೆಲುವು ದಾಖಲಿಸಿದರೆ, ರೋಹಿತ್ ಶರ್ಮಾ ಕೇವಲ 36 ಪಂದ್ಯಗಳಲ್ಲಿ 30 ಜಯ ತಂದುಕೊಡುವ ಮೂಲಕ ಟಿ20 ನಾಯಕತ್ವದಲ್ಲಿ ಮಿಂಚಿದ್ದಾರೆ.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago