ಕ್ರೀಡೆ

ಟೀಂ ಇಂಡಿಯಾ ಕ್ರಿಕೆಟಿಗರು ನಡೆಸುತ್ತಿರುವ ರೆಸ್ಟೋರೆಂಟ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕ್ರಿಕೆಟ್ ಮಾತ್ರವಲ್ಲದೆ ಬೇರೆ ವಲಯದಲ್ಲೂ ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದು, ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದೆಹಲಿ, ಪುಣೆ ಹಾಗೂ ಮುಂಬೈ ಸೇರಿದಂತೆ ಹಲವು ಕಡೆ ಒನ್ 8 ಕಮ್ಯೂನ್ ಎಂಬ ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದಾರೆ. ಇದಲ್ಲದೆ ವಿರಾಟ್ ದೆಹಲಿಯಲ್ಲಿ NUEVA ಎಂಬ ಹೆಸರಿನ ರೆಸ್ಟೋರೆಂಟ್ ಕೂಡ ನಡೆಸುತ್ತಿದ್ದಾರೆ.

ಕೊಹ್ಲಿಯಂತೆಯೇ ರವೀಂದ್ರ ಜಡೇಜಾ ಕೂಡ ಬಹಳ ವರ್ಷಗಳಿಂದ ರೆಸ್ಟೋರೆಂಟ್ ವ್ಯವಹಾರ ನಡೆಸುತ್ತಿದ್ದಾರೆ. ಜಡೇಜಾ ರಾಜ್‌ಕೋಟ್‌ನಲ್ಲಿ ಜಡ್ಡುಸ್ ಫುಡ್ ಫೀಲ್ಡ್ ಎಂಬ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಈ ಹಿಂದೆ ಜಡೇಜಾ ಅವರ ಜಡ್ಡುಸ್ ಫುಡ್ ಫೀಲ್ಡ್ ರೆಸ್ಟೋರೆಂಟ್​ಗೆ ಹಲವು ಕ್ರಿಕೆಟಿಗರು ಭೇಟಿ ನೀಡಿ ರುಚಿ ಸವಿದಿದ್ದರು.

1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಕೂಡ ಪಾಟ್ನಾದಲ್ಲಿ ‘ಇಲೆವೆನ್ಸ್’ ಎಂಬ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದಾರೆ.

ಭಾರತ ಮಹಿಳಾ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕೂಡ SM 18 ಎಂಬ ಹೆಸರಿನ ಕೆಫೆಯನ್ನು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆರಂಭಿಸಿದ್ದಾರೆ.

ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಕೂಡ 2005ರಲ್ಲಿ ಫೈನ್ ಡೈನಿಂಗ್ ರೆಸ್ಟೋರೆಂಟ್ ಅನ್ನು ಪುಣೆಯಲ್ಲಿ ಆರಂಭಿಸಿದ್ದಾರೆ.

andolanait

Recent Posts

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

19 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

24 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

39 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

1 hour ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

1 hour ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

2 hours ago