ಕ್ರೀಡೆ

ಟೀಂ ಇಂಡಿಯಾ ಕ್ರಿಕೆಟಿಗರು ನಡೆಸುತ್ತಿರುವ ರೆಸ್ಟೋರೆಂಟ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕ್ರಿಕೆಟ್ ಮಾತ್ರವಲ್ಲದೆ ಬೇರೆ ವಲಯದಲ್ಲೂ ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದು, ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದೆಹಲಿ, ಪುಣೆ ಹಾಗೂ ಮುಂಬೈ ಸೇರಿದಂತೆ ಹಲವು ಕಡೆ ಒನ್ 8 ಕಮ್ಯೂನ್ ಎಂಬ ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದಾರೆ. ಇದಲ್ಲದೆ ವಿರಾಟ್ ದೆಹಲಿಯಲ್ಲಿ NUEVA ಎಂಬ ಹೆಸರಿನ ರೆಸ್ಟೋರೆಂಟ್ ಕೂಡ ನಡೆಸುತ್ತಿದ್ದಾರೆ.

ಕೊಹ್ಲಿಯಂತೆಯೇ ರವೀಂದ್ರ ಜಡೇಜಾ ಕೂಡ ಬಹಳ ವರ್ಷಗಳಿಂದ ರೆಸ್ಟೋರೆಂಟ್ ವ್ಯವಹಾರ ನಡೆಸುತ್ತಿದ್ದಾರೆ. ಜಡೇಜಾ ರಾಜ್‌ಕೋಟ್‌ನಲ್ಲಿ ಜಡ್ಡುಸ್ ಫುಡ್ ಫೀಲ್ಡ್ ಎಂಬ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಈ ಹಿಂದೆ ಜಡೇಜಾ ಅವರ ಜಡ್ಡುಸ್ ಫುಡ್ ಫೀಲ್ಡ್ ರೆಸ್ಟೋರೆಂಟ್​ಗೆ ಹಲವು ಕ್ರಿಕೆಟಿಗರು ಭೇಟಿ ನೀಡಿ ರುಚಿ ಸವಿದಿದ್ದರು.

1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಕೂಡ ಪಾಟ್ನಾದಲ್ಲಿ ‘ಇಲೆವೆನ್ಸ್’ ಎಂಬ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದಾರೆ.

ಭಾರತ ಮಹಿಳಾ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕೂಡ SM 18 ಎಂಬ ಹೆಸರಿನ ಕೆಫೆಯನ್ನು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆರಂಭಿಸಿದ್ದಾರೆ.

ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಕೂಡ 2005ರಲ್ಲಿ ಫೈನ್ ಡೈನಿಂಗ್ ರೆಸ್ಟೋರೆಂಟ್ ಅನ್ನು ಪುಣೆಯಲ್ಲಿ ಆರಂಭಿಸಿದ್ದಾರೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago