ಮೆಲ್ಬೋರ್ನ್(ಆಸ್ಟ್ರೇಲಿಯಾ) ಟಿ 20ವಿಶ್ವಕಪ್ 2022 ಇಂಡಿಯಾ vs ಜಿಂಬಾಂಬ್ಬೆ : ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಮದ ಸೆಮೀಸ್ಗೆ ಎಂಟ್ರಿ ಕೊಟ್ಟಿದೆ.
ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಸೆಮೀಸ್ಗೆ ಎಂಟ್ರಿ ಕೊಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಜಿಂಬಾಬ್ವೆ ತಂಡವು 17.2 ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 115 ರನ್ ಗೆ ಕುಸಿತಕಂಡಿತು. ಈ ಮೂಲಕ ಭಾರತ 71 ರನ್ ಗಳಿಂದ ಜಯ ದಾಖಲಿಸಿತು. ಇದರಿಂದ ಭಾರತ ಗ್ರ್ಯಾಂಡ್ ಆಗಿ ಸೆಮಿ ಫೈನಲ್ಗೆ ಎಂಟ್ರಿ ನೀಡಿದೆ. ಇತ್ತ ಜಿಂಬಾಬ್ವೆ ಪರ ಕೇವಲ ಸಿಕಂಧರ್ ರಾಜಾ 34 ರನ್ ಮತ್ತು ರಾಯನ್ 35 ರನ್ ಗಳಿಸಿದರು.
ಇನ್ನು, ಜಿಂಬಾಬ್ವೆ ಆಟಗಾರರಿಗೆ ಯಾವುದೇ ಹಂತದಲ್ಲಿಯೂ ಟಾರ್ಗೆಟ್ ಕಡೆ ಮುನ್ನುಗ್ಗಲು ಭಾರತದ ಬೌಲರ್ಗಳು ಅವಕಾಶವನ್ನೇ ನೀಡಲಿಲ್ಲ. ಭಾರತದ ಪರ ಅಶ್ವಿನ್ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖರಾದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…