ಕ್ರೀಡೆ

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಹೈದರಾಬಾದ್‌: ಅಭಿಷೇಕ್‌ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್‌ ಹೆಡ್‌ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 245 ರನ್‌ ಚೇಸ್‌ ಮಾಡಿದ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿಯೇ ಅತೀಹೆಚ್ಚು ರನ್‌ ಚೇಸ್‌ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 245 ರನ್‌ ಬಾರಿಸಿತು. ಈ ಮೊತ್ತ ಬೆನ್ನತ್ತಿದ ಹೈದರಾಬಾದ್‌ 18.3 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 247 ರನ್‌ ಬಾರಿಸಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಪಂಜಾಬ್‌ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ಗೆ ಉತ್ತಮ ಆರಂಭ ದೊರೆಯಿತು. ಪ್ರಿಯಾಂಶ್‌ ಆರ್ಯ 36(13), ಪ್ರಭ್‌ಸಿಮ್ರಾನ್‌ 42(23) ರನ್‌ ಗಳಿಸಿದರು. ನಾಯಕ ಶ್ರೇಯಸ್‌ ಅಯ್ಯರ್‌ 82(36) ರನ್‌ ಗಳಿಸಿದರೇ, ನೇಹಲ್‌ ವಧೇರಾ 27(22) ರನ್‌ ಗಳಿಸಿದರು.

ಉಳಿದಂತೆ ಶಶಾಂಕ್‌ ಸಿಂಗ್‌ 2(3), ಮ್ಯಾಕ್ಸ್‌ವೆಲ್‌ 3(7) ರನ್‌ ಬಾರಿಸಿದರು. ಸ್ಟೋಯ್ನಿಸ್‌ ಔಟಾಗದೆ 34(11) ರನ್‌ ಗಳಿಸಿದರೇ, ಏನ್ಸನ್‌ ಔಟಾಗದೇ 5(5) ರನ್‌ ಗಳಿಸಿ ಉಳಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಪ್ರಮುಖ ನಾಲ್ಕು ವಿಕೆಟ್‌ ಪಡೆದರೆ, ಮಲಿಂಗಾ ಎರಡು ವಿಕೆಟ್‌ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಹೈದರಾಬಾದ್‌ಗೆ ಭರ್ಜರಿ ಆರಂಭ ದೊರೆಯಿತು. ಆರಂಭಿಕರಾಗಿ ಬಂದ ಟ್ರಾವಿಸ್‌ ಹೆಡ್‌ 66(37) ರನ್‌ ಬಾರಿಸಿ ಔಟಾದರೇ, ಅಭಿಷೇಕ್‌ ಶರ್ಮಾ 55 ಎಸೆತಗಳಲ್ಲಿ 14 ಬೌಂಡರಿ, ಭರ್ಜರಿ 10 ಸಿಕ್ಸರ್‌ ಸಹಿತ 141 ರನ್‌ ಚಚ್ಚಿ ಪೆವಿಲಿಯನ್‌ ಸೇರಿದರು.

ಕೊನೆಯಲ್ಲಿ ಒಂದಾದ ಕ್ಲಾಸೆನ್‌ ಮತ್ತು ಇಶಾನ್‌ ಕಿಸಾನ್‌ ಔಟಾಗದೇ ಕ್ರಮವಾಗಿ 21(14), 9(6) ರನ್‌ ಕೆಲಹಾಕಿ ಗೆಲುವಿನ ನಗೆ ಬೀರಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌ ಮತ್ತು ಚಾಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಅಭಿಷೇಕ್‌ ಶರ್ಮಾ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

25 mins ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

27 mins ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

32 mins ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

49 mins ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

2 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

3 hours ago