ಕ್ರೀಡೆ

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಹೈದರಾಬಾದ್‌: ಅಭಿಷೇಕ್‌ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್‌ ಹೆಡ್‌ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 245 ರನ್‌ ಚೇಸ್‌ ಮಾಡಿದ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿಯೇ ಅತೀಹೆಚ್ಚು ರನ್‌ ಚೇಸ್‌ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 245 ರನ್‌ ಬಾರಿಸಿತು. ಈ ಮೊತ್ತ ಬೆನ್ನತ್ತಿದ ಹೈದರಾಬಾದ್‌ 18.3 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 247 ರನ್‌ ಬಾರಿಸಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಪಂಜಾಬ್‌ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ಗೆ ಉತ್ತಮ ಆರಂಭ ದೊರೆಯಿತು. ಪ್ರಿಯಾಂಶ್‌ ಆರ್ಯ 36(13), ಪ್ರಭ್‌ಸಿಮ್ರಾನ್‌ 42(23) ರನ್‌ ಗಳಿಸಿದರು. ನಾಯಕ ಶ್ರೇಯಸ್‌ ಅಯ್ಯರ್‌ 82(36) ರನ್‌ ಗಳಿಸಿದರೇ, ನೇಹಲ್‌ ವಧೇರಾ 27(22) ರನ್‌ ಗಳಿಸಿದರು.

ಉಳಿದಂತೆ ಶಶಾಂಕ್‌ ಸಿಂಗ್‌ 2(3), ಮ್ಯಾಕ್ಸ್‌ವೆಲ್‌ 3(7) ರನ್‌ ಬಾರಿಸಿದರು. ಸ್ಟೋಯ್ನಿಸ್‌ ಔಟಾಗದೆ 34(11) ರನ್‌ ಗಳಿಸಿದರೇ, ಏನ್ಸನ್‌ ಔಟಾಗದೇ 5(5) ರನ್‌ ಗಳಿಸಿ ಉಳಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಪ್ರಮುಖ ನಾಲ್ಕು ವಿಕೆಟ್‌ ಪಡೆದರೆ, ಮಲಿಂಗಾ ಎರಡು ವಿಕೆಟ್‌ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಹೈದರಾಬಾದ್‌ಗೆ ಭರ್ಜರಿ ಆರಂಭ ದೊರೆಯಿತು. ಆರಂಭಿಕರಾಗಿ ಬಂದ ಟ್ರಾವಿಸ್‌ ಹೆಡ್‌ 66(37) ರನ್‌ ಬಾರಿಸಿ ಔಟಾದರೇ, ಅಭಿಷೇಕ್‌ ಶರ್ಮಾ 55 ಎಸೆತಗಳಲ್ಲಿ 14 ಬೌಂಡರಿ, ಭರ್ಜರಿ 10 ಸಿಕ್ಸರ್‌ ಸಹಿತ 141 ರನ್‌ ಚಚ್ಚಿ ಪೆವಿಲಿಯನ್‌ ಸೇರಿದರು.

ಕೊನೆಯಲ್ಲಿ ಒಂದಾದ ಕ್ಲಾಸೆನ್‌ ಮತ್ತು ಇಶಾನ್‌ ಕಿಸಾನ್‌ ಔಟಾಗದೇ ಕ್ರಮವಾಗಿ 21(14), 9(6) ರನ್‌ ಕೆಲಹಾಕಿ ಗೆಲುವಿನ ನಗೆ ಬೀರಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌ ಮತ್ತು ಚಾಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಅಭಿಷೇಕ್‌ ಶರ್ಮಾ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

4 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

34 mins ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

12 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

14 hours ago