ಕ್ರೀಡೆ

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಹೈದರಾಬಾದ್‌: ಅಭಿಷೇಕ್‌ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್‌ ಹೆಡ್‌ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 245 ರನ್‌ ಚೇಸ್‌ ಮಾಡಿದ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿಯೇ ಅತೀಹೆಚ್ಚು ರನ್‌ ಚೇಸ್‌ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 245 ರನ್‌ ಬಾರಿಸಿತು. ಈ ಮೊತ್ತ ಬೆನ್ನತ್ತಿದ ಹೈದರಾಬಾದ್‌ 18.3 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 247 ರನ್‌ ಬಾರಿಸಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಪಂಜಾಬ್‌ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ಗೆ ಉತ್ತಮ ಆರಂಭ ದೊರೆಯಿತು. ಪ್ರಿಯಾಂಶ್‌ ಆರ್ಯ 36(13), ಪ್ರಭ್‌ಸಿಮ್ರಾನ್‌ 42(23) ರನ್‌ ಗಳಿಸಿದರು. ನಾಯಕ ಶ್ರೇಯಸ್‌ ಅಯ್ಯರ್‌ 82(36) ರನ್‌ ಗಳಿಸಿದರೇ, ನೇಹಲ್‌ ವಧೇರಾ 27(22) ರನ್‌ ಗಳಿಸಿದರು.

ಉಳಿದಂತೆ ಶಶಾಂಕ್‌ ಸಿಂಗ್‌ 2(3), ಮ್ಯಾಕ್ಸ್‌ವೆಲ್‌ 3(7) ರನ್‌ ಬಾರಿಸಿದರು. ಸ್ಟೋಯ್ನಿಸ್‌ ಔಟಾಗದೆ 34(11) ರನ್‌ ಗಳಿಸಿದರೇ, ಏನ್ಸನ್‌ ಔಟಾಗದೇ 5(5) ರನ್‌ ಗಳಿಸಿ ಉಳಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ ಪ್ರಮುಖ ನಾಲ್ಕು ವಿಕೆಟ್‌ ಪಡೆದರೆ, ಮಲಿಂಗಾ ಎರಡು ವಿಕೆಟ್‌ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಹೈದರಾಬಾದ್‌ಗೆ ಭರ್ಜರಿ ಆರಂಭ ದೊರೆಯಿತು. ಆರಂಭಿಕರಾಗಿ ಬಂದ ಟ್ರಾವಿಸ್‌ ಹೆಡ್‌ 66(37) ರನ್‌ ಬಾರಿಸಿ ಔಟಾದರೇ, ಅಭಿಷೇಕ್‌ ಶರ್ಮಾ 55 ಎಸೆತಗಳಲ್ಲಿ 14 ಬೌಂಡರಿ, ಭರ್ಜರಿ 10 ಸಿಕ್ಸರ್‌ ಸಹಿತ 141 ರನ್‌ ಚಚ್ಚಿ ಪೆವಿಲಿಯನ್‌ ಸೇರಿದರು.

ಕೊನೆಯಲ್ಲಿ ಒಂದಾದ ಕ್ಲಾಸೆನ್‌ ಮತ್ತು ಇಶಾನ್‌ ಕಿಸಾನ್‌ ಔಟಾಗದೇ ಕ್ರಮವಾಗಿ 21(14), 9(6) ರನ್‌ ಕೆಲಹಾಕಿ ಗೆಲುವಿನ ನಗೆ ಬೀರಿದರು.

ಪಂಜಾಬ್‌ ಪರ ಅರ್ಶ್‌ದೀಪ್‌ ಸಿಂಗ್‌ ಮತ್ತು ಚಾಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಅಭಿಷೇಕ್‌ ಶರ್ಮಾ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago