ನವದೆಹಲಿ : ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತೇ ಇದೆ. ಆದರೆ, ಇತ್ತೀಚೆಗೆ ಸೌರವ್ ಗಂಗೂಲಿ, ವಿರಾಟ್ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದು, ತಾವು ವಿರಾಟ್ ನಾಯಕತ್ವದಿಂದ ಕೆಳಗಿಳಿಯಲು ಹೊಣೆಗಾರರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಿಯಾಲಿಟಿ ಶೋ ದಾದಾಗಿರಿ ಅನ್ಲಿಮಿಟೆಡ್ ಸೀಸನ್-೧೦ ರಲ್ಲಿ ಭಾಗವಹಿಸಿ ಮಾತನಾಡಿರುವ ದಾದಾ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ಅವರನ್ನು ನಾನು ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿಲ್ಲ. ಈ ಹಿಂದೆಯೂ ಸಾಕಷ್ಟು ಬಾರಿ ಇದರ ಬಗ್ಗೆ ಮಾತನಾಡಿದ್ದೇನೆ. ಭಾರತ ತಂಡವು ೨೦೨೧ರ ವಿಶ್ವಕಪ್ ನಲ್ಲಿ ತೋರಿದ ಕಳಪೆ ಪ್ರದರ್ಶನದಿಂದಾಗಿ ವಿರಾಟ್ ಟಿ೨೦ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಹೀಗಾಗಿ ಅವರು ನಾಯಕತ್ವದಿಂದ ವಹಿಸಲು ಆಸಕ್ತಿ ಇಲ್ಲದೇ ಇರುವುದರಿಂದ ನಾಯಕತ್ವ ತೊರೆಯಲು ನಿರ್ಧಿರಿಸಿದ್ದಾಗ, ನೀವು ತೊರೆಯುವುದಾದರೇ ಸಂಪೂರ್ಣ ವೈಟ್ ಬಾಲ್ ಕ್ರಿಕೆಟ್ನಿಂದ ಹಿಂದೆ ಸರಿಯುವುದು ಉತ್ತಮ ಎಂದು ಸಲಹೆ ನೀಡಿದ್ದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಆಗ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ, ಏಕದಿನ ಹಾಗೂ ಟೆಸ್ಟ್ ನಾಯಕತ್ವದಲ್ಲಿ ಮುಂದುವರಿಯಲು ಕೊಹ್ಲಿ ಇಚ್ಛಿಸುತ್ತಾರೆ. ಆದರೆ, ಟಿ-20 ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಬಿಸಿಸಿಐ ಎಂದಿಗೂ ವಿರಾಟ್ ಅವರನ್ನು ಕೇಳಲಿಲ್ಲ ಎಂದು ಹೇಳುವ ಮೂಲಕ ಗಂಗೂಲಿ ಅಚ್ಚರಿ ಮೂಡಿಸಿದ್ದರು. ಕೊಹ್ಲಿ ತಂಡದ ನಾಯಕತ್ವದಿಂದ ಕೆಳಗಿಳಿಯಲು ನಾನು ಹೊಣೆಗಾರನಲ್ಲ ಎಂದಿದ್ದು, ವಿರಾಟ್ ಮತ್ತು ಗಂಗೂಲಿನ ನಡುವಿನ ಬಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು ಎಂದು ನಂಬಲಾಗಿತ್ತು.
ಭಾರತೀಯ ಕ್ರಿಕೆಟ್ನ ಸುಧಾರಣೆಗಾಗಿ ಕೆಲಸ ಮಾಡಲು ನನ್ನನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು ಎಂದು ಗಂಗೂಲಿ ಹೇಳಿದ್ದರು
ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ನಂತರ ರೋಹಿತ್ ಶರ್ಮಾ ಅವರು ಎಲ್ಲಾ ಮೂರು ಮಾದರಿಗೆ ನಾಯಕತ್ವ ವಹಿಸಿಕೊಳ್ಳಲು ನಿರಾಕರಿಸಿದರು, ಆದರೆ ನಾನು ಅವರಿಗೆ ನಾಯಕತ್ವ ವಹಿಸಿಕೊಳ್ಳುವಂತೆ ಅವನ ಮನವೋಲಿಸಲು ಪ್ರಯತ್ನಿಸಿದ್ದೆ. ಬಹುಶಃ ಇದರಲ್ಲಿ ನನ್ನ ಕೊಡುಗೆ ಇರಬಹುದು ಎಂದರು.
2021ರ ಟಿ-20 ವಿಶ್ವಕಪ್ನಲ್ಲಿ ಕಳಪೆ ಅಭಿಯಾನ ಕೈಗೊಂಡ ನಂತರ ಕೊಹ್ಲಿ ಟಿ-20 ನಾಯಕತ್ವ ತ್ಯಜಿಸಲು ನಿರ್ಧರಿಸಿದ್ದರು. ಆಗ ಕೊಹ್ಲಿ ಹಾಗೂ ಗಂಗುಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕೊಹ್ಲಿ ಆ ನಂತರ ಏಕದಿನ ಹಾಗೂ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು. ಇದಾದ ನಂತರ ಐಪಿಎಲ್-೨೩ ರಲ್ಲಿ ಡೆಲ್ಲಿ ವಿರುದ್ಧದ ಆರ್ಸಿಬಿ ಪಂದ್ಯದಲ್ಲಿ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ನೀಡದೆಯೇ ಸಾಗಿದ್ದು ಮತ್ತು ವಿರಾಟ್ ಕೊಹ್ಲಿ ಕ್ಯಾಚ್ ಹಿಡಿದು ಡೆಲ್ಲಿ ಡಗ್ಔಟ್ ಕಡೆ ನೋಡಿ ಸಂಭ್ರಮಿಸುತ್ತಾ ಹೋಗಿದ್ದು, ಈ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಭೀತು ಪಡಿಸುವಂತಿತ್ತು.
ಈ ಎಲ್ಲಾ ವಿಚಾರಗಳ ಬಗ್ಗೆ ದಾದಾ ಮತ್ತೊಮ್ಮೆ ಮೌನ ಮುರಿದು ಮಾತನಾಡಿದ್ದು, ವಿರಾಟ್ ನಾಯಕತ್ವದಿಂದ ಇಳಿಯಲು ನಾನು ಕಾರಣರಲ್ಲ ಎಂದು ಹೇಳಿದ್ದು, ವಿರಾಟ್ ಮುಂದಿನ ನಡೆ ಬಗ್ಗೆ ಹಲವಾರು ಕುತೂಹಲ ಮತ್ತು ಚರ್ಚೆಗಳು ಹೆಚ್ಚಾಗಿವೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…