ಕ್ರೀಡೆ

ಕೊಹ್ಲಿಗೆ ವೈಟ್‌ಬಾಲ್‌ ನಾಯಕತ್ವದಿಂದ ಹೊರಗುಳಿಯುವಂತೆ ಸೂಚಿಸಿದ್ದೆ: ಗಂಗೂಲಿ ಹೀಗೇಳಿದ್ದೇಕೆ?

ನವದೆಹಲಿ : ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತೇ ಇದೆ. ಆದರೆ, ಇತ್ತೀಚೆಗೆ ಸೌರವ್‌ ಗಂಗೂಲಿ, ವಿರಾಟ್‌ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದು, ತಾವು ವಿರಾಟ್‌ ನಾಯಕತ್ವದಿಂದ ಕೆಳಗಿಳಿಯಲು ಹೊಣೆಗಾರರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಿಯಾಲಿಟಿ ಶೋ ದಾದಾಗಿರಿ ಅನ್‌ಲಿಮಿಟೆಡ್‌ ಸೀಸನ್‌-೧೦ ರಲ್ಲಿ ಭಾಗವಹಿಸಿ ಮಾತನಾಡಿರುವ ದಾದಾ ಸೌರವ್‌ ಗಂಗೂಲಿ, ವಿರಾಟ್‌ ಕೊಹ್ಲಿ ಅವರನ್ನು ನಾನು ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿಲ್ಲ. ಈ ಹಿಂದೆಯೂ ಸಾಕಷ್ಟು ಬಾರಿ ಇದರ ಬಗ್ಗೆ ಮಾತನಾಡಿದ್ದೇನೆ. ಭಾರತ ತಂಡವು ೨೦೨೧ರ ವಿಶ್ವಕಪ್‌ ನಲ್ಲಿ ತೋರಿದ ಕಳಪೆ ಪ್ರದರ್ಶನದಿಂದಾಗಿ ವಿರಾಟ್‌ ಟಿ೨೦ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಹೀಗಾಗಿ ಅವರು ನಾಯಕತ್ವದಿಂದ ವಹಿಸಲು ಆಸಕ್ತಿ ಇಲ್ಲದೇ ಇರುವುದರಿಂದ ನಾಯಕತ್ವ ತೊರೆಯಲು ನಿರ್ಧಿರಿಸಿದ್ದಾಗ, ನೀವು ತೊರೆಯುವುದಾದರೇ ಸಂಪೂರ್ಣ ವೈಟ್‌ ಬಾಲ್‌ ಕ್ರಿಕೆಟ್‌ನಿಂದ ಹಿಂದೆ ಸರಿಯುವುದು ಉತ್ತಮ ಎಂದು ಸಲಹೆ ನೀಡಿದ್ದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.

ಆಗ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ, ಏಕದಿನ ಹಾಗೂ ಟೆಸ್ಟ್ ನಾಯಕತ್ವದಲ್ಲಿ ಮುಂದುವರಿಯಲು ಕೊಹ್ಲಿ ಇಚ್ಛಿಸುತ್ತಾರೆ. ಆದರೆ, ಟಿ-20 ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಬಿಸಿಸಿಐ ಎಂದಿಗೂ ವಿರಾಟ್‌ ಅವರನ್ನು ಕೇಳಲಿಲ್ಲ ಎಂದು ಹೇಳುವ ಮೂಲಕ ಗಂಗೂಲಿ ಅಚ್ಚರಿ ಮೂಡಿಸಿದ್ದರು. ಕೊಹ್ಲಿ ತಂಡದ ನಾಯಕತ್ವದಿಂದ ಕೆಳಗಿಳಿಯಲು ನಾನು ಹೊಣೆಗಾರನಲ್ಲ ಎಂದಿದ್ದು, ವಿರಾಟ್‌ ಮತ್ತು ಗಂಗೂಲಿನ ನಡುವಿನ ಬಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು ಎಂದು ನಂಬಲಾಗಿತ್ತು.

ಭಾರತೀಯ ಕ್ರಿಕೆಟ್‌ನ ಸುಧಾರಣೆಗಾಗಿ ಕೆಲಸ ಮಾಡಲು ನನ್ನನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು ಎಂದು ಗಂಗೂಲಿ ಹೇಳಿದ್ದರು

ವಿರಾಟ್‌ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ನಂತರ ರೋಹಿತ್‌ ಶರ್ಮಾ ಅವರು ಎಲ್ಲಾ ಮೂರು ಮಾದರಿಗೆ ನಾಯಕತ್ವ ವಹಿಸಿಕೊಳ್ಳಲು ನಿರಾಕರಿಸಿದರು, ಆದರೆ ನಾನು ಅವರಿಗೆ ನಾಯಕತ್ವ ವಹಿಸಿಕೊಳ್ಳುವಂತೆ ಅವನ ಮನವೋಲಿಸಲು ಪ್ರಯತ್ನಿಸಿದ್ದೆ. ಬಹುಶಃ ಇದರಲ್ಲಿ ನನ್ನ ಕೊಡುಗೆ ಇರಬಹುದು ಎಂದರು.

2021ರ ಟಿ-20 ವಿಶ್ವಕಪ್‌ನಲ್ಲಿ ಕಳಪೆ ಅಭಿಯಾನ ಕೈಗೊಂಡ ನಂತರ ಕೊಹ್ಲಿ ಟಿ-20 ನಾಯಕತ್ವ ತ್ಯಜಿಸಲು ನಿರ್ಧರಿಸಿದ್ದರು. ಆಗ ಕೊಹ್ಲಿ ಹಾಗೂ ಗಂಗುಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕೊಹ್ಲಿ ಆ ನಂತರ ಏಕದಿನ ಹಾಗೂ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು. ಇದಾದ ನಂತರ ಐಪಿಎಲ್‌-೨೩ ರಲ್ಲಿ ಡೆಲ್ಲಿ ವಿರುದ್ಧದ ಆರ್‌ಸಿಬಿ ಪಂದ್ಯದಲ್ಲಿ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ನೀಡದೆಯೇ ಸಾಗಿದ್ದು ಮತ್ತು ವಿರಾಟ್‌ ಕೊಹ್ಲಿ ಕ್ಯಾಚ್‌ ಹಿಡಿದು ಡೆಲ್ಲಿ ಡಗ್‌ಔಟ್‌ ಕಡೆ ನೋಡಿ ಸಂಭ್ರಮಿಸುತ್ತಾ ಹೋಗಿದ್ದು, ಈ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಭೀತು ಪಡಿಸುವಂತಿತ್ತು.

ಈ ಎಲ್ಲಾ ವಿಚಾರಗಳ ಬಗ್ಗೆ ದಾದಾ ಮತ್ತೊಮ್ಮೆ ಮೌನ ಮುರಿದು ಮಾತನಾಡಿದ್ದು, ವಿರಾಟ್‌ ನಾಯಕತ್ವದಿಂದ ಇಳಿಯಲು ನಾನು ಕಾರಣರಲ್ಲ ಎಂದು ಹೇಳಿದ್ದು, ವಿರಾಟ್‌ ಮುಂದಿನ ನಡೆ ಬಗ್ಗೆ ಹಲವಾರು ಕುತೂಹಲ ಮತ್ತು ಚರ್ಚೆಗಳು ಹೆಚ್ಚಾಗಿವೆ.

andolanait

Recent Posts

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

13 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

54 mins ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

1 hour ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

1 hour ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

3 hours ago