ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್ ಟೀಮ್ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ.
ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ ತಂಡಗಳ ಪರ ಆಡಲು ಸಾಧ್ಯವಾಗುತ್ತಿಲ್ಲ ಎಂದು ಈ ಇಬ್ಬರು ಆಟಗಾರರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವೈದ್ಯಕೀಯ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎಂದು ಇಎಸ್ಪಿಎನ್ಕ್ರಿಕ್ಇನ್ಫೊ (ESPNcricinfo) ವರದಿ ಮಾಡಿದೆ.
ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಸಿಡ್ನಿಯಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ವೇಳೆ ಅವರಿಗೆ ಕುತ್ತಿಗೆ ನೋವು ಕಾಣಿಸಿಕೊಂಡಿತ್ತು. ನೋವು ಸಂಪೂರ್ಣ ಶಮನವಾಗಿಲ್ಲದ ಕಾರಣ ಆಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಆಟಗಾರರು ರಾಷ್ಟ್ರೀಯ ತಂಡದ ಆಯ್ಕೆ ಪಟ್ಟಿಯಲ್ಲಿ ಉಳಿಯಬೇಕಾದರೆ ದೇಶಿ ಕ್ರಿಕೆಟ್ನಲ್ಲಿ ತಮ್ಮ ರಾಜ್ಯ ತಂಡದ ಪರವಾಗಿ ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ಕಡ್ಡಾಯಗೊಳಿಸಿದೆ. ತಪ್ಪಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…