ಕ್ರೀಡೆ

ರಣಜಿ ಟೂರ್ನಿಯಲ್ಲಿ ಆಡಲಾರೆ ಎಂದ ವಿರಾಟ್‌ ಕೊಹ್ಲಿ

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ.

ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ ತಂಡಗಳ ಪರ ಆಡಲು ಸಾಧ್ಯವಾಗುತ್ತಿಲ್ಲ ಎಂದು ಈ ಇಬ್ಬರು ಆಟಗಾರರು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ವೈದ್ಯಕೀಯ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೊ (ESPNcricinfo) ವರದಿ ಮಾಡಿದೆ.

ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌-ಗವಾಸ್ಕರ್ ಟ್ರೋಫಿ ಸರಣಿಯ ವೇಳೆ ವಿರಾಟ್‌ ಕೊಹ್ಲಿ ಗಾಯಗೊಂಡಿದ್ದರು. ಸಿಡ್ನಿಯಲ್ಲಿ ನಡೆದ ಐದನೇ ಟೆಸ್ಟ್‌ ಪಂದ್ಯದ ವೇಳೆ ಅವರಿಗೆ ಕುತ್ತಿಗೆ ನೋವು ಕಾಣಿಸಿಕೊಂಡಿತ್ತು. ನೋವು ಸಂಪೂರ್ಣ ಶಮನವಾಗಿಲ್ಲದ ಕಾರಣ ಆಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಆಟಗಾರರು ರಾಷ್ಟ್ರೀಯ ತಂಡದ ಆಯ್ಕೆ ಪಟ್ಟಿಯಲ್ಲಿ ಉಳಿಯಬೇಕಾದರೆ ದೇಶಿ ಕ್ರಿಕೆಟ್‌ನಲ್ಲಿ ತಮ್ಮ ರಾಜ್ಯ ತಂಡದ ಪರವಾಗಿ ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ಕಡ್ಡಾಯಗೊಳಿಸಿದೆ. ತಪ್ಪಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago