ಕ್ರೀಡೆ

ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ: ಫುಟ್ಬಾಲ್‌ ತಾರೆ ಬೆಕ್‌ಹ್ಯಾಮ್‌

ಮುಂಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡದ ಮೊದಲ ಸೆಮಿಸ್‌ ಪಂದ್ಯಕ್ಕೆ ಫುಟ್ಬಾಲ್‌ ತಾರೆ ಸಾಕ್ಷಿಯಾಗಿದ್ದಾರೆ. ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಶತಕಗಳ ಅರ್ಧ ಶತಕ ಸಿಡಿಸಿದ್ದನ್ನು ಹೊಗಳಿದ ಫುಟ್ಬಾಲ್‌ ತಾರೆ ಡೆವಿಡ್‌ ಬ್ಯಾಕ್‌ಹ್ಯಾಮ್‌ “ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ” ಎಂದು ವಿರಾಟ್‌ ಶತಕಕ್ಕೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲ್ಯಾಂಡ್‌ ವಿರುದ್ಧ ತಮ್ಮ 50ನೇ ಏಕದಿನ ಶತಕ ಸಿಡಿಸಿದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ, ಸಚಿನ್‌ ಹೆಸರಿನಲ್ಲಿದ್ದ 49 ಶತಕ ದಾಖಲೆಯನ್ನು ಮುರಿದು ಸಾರ್ವಕಾಲಿಕ ದಾಖಲೆ ನಿರ್ಮಿಸಿದರು.

ಡೆವಿಡ್‌ ಬ್ಯಾಕ್‌ಹ್ಯಾಮ್‌ ಅವರು ಸಿನ್‌ ತೆಂಡುಲ್ಕರ್‌, ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರೊಂದಿಗೆ ಪಂದ್ಯ ವೀಕ್ಷಿಸಿದರು.

ಮೊದಲ ಇನ್ನಿಂಗ್ಸ್‌ ಬಳಿಕ ಮಾತನಾಡಿ, “ಈ ಕ್ರೀಡಾಂಗಣದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ನಿಜವಾದ ಸಂತೋಷ. ನಾನು ಇಂದು ಸಚಿನ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದಿದ್ದೇನೆ. ಅವರು ಈ ಕ್ರೀಡಾಂಗಣದಲ್ಲಿ ಏನು ಸಾಧಿಸಿದ್ದಾರೆಂದು ನನಗೆ ತಿಳಿದಿದೆ. ಸಚಿನ್ ಸಾಧನೆ ಮುರಿದ ವಿರಾಟ್ ಕೊಹ್ಲಿಯ ಶತಕದ ವೈಭವ ನಂಬಲು ಅಸಾಧ್ಯವಾಗಿದೆ. ನಾನು ಮೊದಲ ಬಾರಿಗೆ ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ. ಇದು ತುಂಬಾ ವಿಶೇಷ ಕ್ಷಣ” ಎಂದು ವಿರಾಟ್ ಶತಕಕ್ಕೆ ಬೆಕ್‌ ಹ್ಯಾಮ್‌ ಪ್ರತಿಕ್ರಿಯಿಸಿದ್ದಾರೆ.

 

andolanait

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

14 mins ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

15 mins ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

28 mins ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

35 mins ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

1 hour ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

2 hours ago