ಮುಂಬೈ : ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡದ ಮೊದಲ ಸೆಮಿಸ್ ಪಂದ್ಯಕ್ಕೆ ಫುಟ್ಬಾಲ್ ತಾರೆ ಸಾಕ್ಷಿಯಾಗಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕಗಳ ಅರ್ಧ ಶತಕ ಸಿಡಿಸಿದ್ದನ್ನು ಹೊಗಳಿದ ಫುಟ್ಬಾಲ್ ತಾರೆ ಡೆವಿಡ್ ಬ್ಯಾಕ್ಹ್ಯಾಮ್ “ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ” ಎಂದು ವಿರಾಟ್ ಶತಕಕ್ಕೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧ ತಮ್ಮ 50ನೇ ಏಕದಿನ ಶತಕ ಸಿಡಿಸಿದ ರನ್ ಮೆಷಿನ್ ವಿರಾಟ್ ಕೊಹ್ಲಿ, ಸಚಿನ್ ಹೆಸರಿನಲ್ಲಿದ್ದ 49 ಶತಕ ದಾಖಲೆಯನ್ನು ಮುರಿದು ಸಾರ್ವಕಾಲಿಕ ದಾಖಲೆ ನಿರ್ಮಿಸಿದರು.
ಡೆವಿಡ್ ಬ್ಯಾಕ್ಹ್ಯಾಮ್ ಅವರು ಸಿನ್ ತೆಂಡುಲ್ಕರ್, ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರೊಂದಿಗೆ ಪಂದ್ಯ ವೀಕ್ಷಿಸಿದರು.
ಮೊದಲ ಇನ್ನಿಂಗ್ಸ್ ಬಳಿಕ ಮಾತನಾಡಿ, “ಈ ಕ್ರೀಡಾಂಗಣದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ನಿಜವಾದ ಸಂತೋಷ. ನಾನು ಇಂದು ಸಚಿನ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದಿದ್ದೇನೆ. ಅವರು ಈ ಕ್ರೀಡಾಂಗಣದಲ್ಲಿ ಏನು ಸಾಧಿಸಿದ್ದಾರೆಂದು ನನಗೆ ತಿಳಿದಿದೆ. ಸಚಿನ್ ಸಾಧನೆ ಮುರಿದ ವಿರಾಟ್ ಕೊಹ್ಲಿಯ ಶತಕದ ವೈಭವ ನಂಬಲು ಅಸಾಧ್ಯವಾಗಿದೆ. ನಾನು ಮೊದಲ ಬಾರಿಗೆ ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ. ಇದು ತುಂಬಾ ವಿಶೇಷ ಕ್ಷಣ” ಎಂದು ವಿರಾಟ್ ಶತಕಕ್ಕೆ ಬೆಕ್ ಹ್ಯಾಮ್ ಪ್ರತಿಕ್ರಿಯಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…