ಕ್ರೀಡೆ

ಕೊಹ್ಲಿ ಜೊತೆ ವೈಯಕ್ತಿಕವಾಗಿ ವಿಶೇಷ ಬಾಂಧವ್ಯ ಹೊಂದಿದ್ದೇನೆ: ಸರ್ಬಿಯಾ ತಾರೆ ಜೊಕೊವಿಕ್‌

ಬೆಂಗಳೂರು: ಟೆನ್ನಿಸ್‌ ದಿಗ್ಗಜ ನೊವಾಕ್‌ ಜೊಕೊವಿಕ್‌ ಅವರು ಕ್ರಿಕೆಟ್‌ ತಾರೆ ವಿರಾಟ್‌ ಕೊಹ್ಲ ಅವರನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮತ್ತು ಕೊಹ್ಲಿಯನ್ನು ನೇರವಾಗಿ ಭೇಟಿಯಾಗುವ ಬಯಕೆಯನ್ನು ಹೊಂದಿರುವುದಾಗಿ ಜೊಕೊವಿಕ್‌ ಹೇಳಿದ್ದಾರೆ.

ಜನವರಿ 14ರಿಂದ ಆರಂಭವಾಗಲಿರುವ 11ನೇ ಆಸ್ಟ್ರೇಲಿಯಾ ಓಪನ್‌ ಚಾಂಪಿಯನ್‌ಶಿಪ್‌ ಟೂರ್ನಿಗೂ ಮುನ್ನ ಸೋನಿ ಸ್ಪೋರ್ಟ್ಸ್‌ ಜೊತೆ ನಡೆದ ವಿಶೇಷ ಸಂದರ್ಶನದಲ್ಲಿ ತಾವು ವಿರಾಟ್‌ ಕೊಹ್ಲಿಯೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಾಗಿ ಜೊಕೊವಿಕ್‌ ಬಹಿರಂಗಪಡಿಸಿದ್ದಾರೆ.

ವಿರಾಟ್‌ ಅವರು ನನ್ನ ಬಗ್ಗೆ ಆಡವ ಮಾತುಗಳನ್ನು ಕೇಳಲು ತುಂಬಾ ಸಂತೋಷವಾಗುತ್ತದೆ. ಮತ್ತು ಅವರ ಸಾಧನೆಗಳನ್ನು ಕೇಳಲು ಹೆಮ್ಮೆ ಎನಿಸುತ್ತದೆ ಎಂದು ಸರ್ಬಿಯಾದ ತಾರೆ ನೊವಾಕ್‌ ಜೊಕೊವಿಕ್‌ ತಿಳಿಸಿದ್ದಾರೆ.

“ನನಗೆ ಭಾರತದ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವರ ಜೊತೆಗೆ ವೈಯಕ್ತಿಕವಾಗಿ ವಿಶೇಷ ಬಾಂಧವ್ಯ ಹೊಂದಿದ್ದೇನೆ. ನಮ್ಮಿಬ್ಬರ ನಡುವಿನ ಭಾಂದವ್ಯ ತುಂಬಾ ಚನ್ನಾಗಿದೆ. ಹಲವು ವರ್ಷಗಳಿಂದ ಸಂಪರ್ಕದಲ್ಲಿದ್ದರು ಒಮ್ಮೆಯೂ ವಯಕ್ತಿಕವಾಗಿ ಭೇಟಿಯಾಗಿಲ್ಲ. ವಿರಾಟ್‌ ಅವರನ್ನು ನೇರವಾಗಿ ಭೇಟಿ ಆಗಬೇಕು ಎಂದು ತುಂಬಾ ಅನಿಸುತ್ತದೆ. ಆತ(ಕೊಹ್ಲಿ) ನನ್ನ ಬಗ್ಗೆ ಆಡುವ ಮಾತುಗಳನ್ನು ಕೇಳಲು ಹಿತವಾಗಿರುತ್ತದೆ ಎಂದು ನೊವಾಕ್ ಜೊಕೊವಿಕ್ ಹೇಳಿದ್ದಾರೆ.

ವಿಶ್ವದಲ್ಲೇ ಅತ್ಯಂತ ಶ್ರೀಮಂತ ಕಲೆ ಹಾಗೂ ಸಂಸ್ಕೃತಿ ಹೊಂದಿರುವ ದೇಶವಾದ ಭಾರತಕ್ಕೆ ಶೀಘ್ರವೇ ಭೇಟಿ ನೀಡಲು ಬಯಸಿದ್ದೇನೆ ಎಂದಿದ್ದಾರೆ.

ನನ್ನ ವೃತ್ತಿ ಜೀವನ ನಮ್ಮ ಕುಟುಂಬಕ್ಕೆ ಹೆಮ್ಮೆ ತಂದಿದೆ: ನಾನು 4-5 ವರ್ಷ ಬಾಲಕನಾಗಿದ್ದಾಗಲೇ ಟೆನ್ನಿಸ್ ಲೋಕದಲ್ಲಿ ಬಲು ಎತ್ತರಕ್ಕೆ ಬೆಳೆಯುವ ಕನಸು ಕಂಡಿದ್ದೆ‌. ಈ ಸುಂದರವಾದ ಕ್ರೀಡೆಯಲ್ಲಿ ಹಲವಾರು ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿರುವುದು ನನಗೂ ಹಾಗೂ ನನ್ನ ಕುಟುಂಬದವರಿಗೂ ತುಂಬಾ ಹೆಮ್ಮೆ ಮೂಡಿಸಿದೆ,” ದೇವರ ಆಶೀರ್ವಾದದಿಂದ ಉತ್ತಮ ಸ್ಥಾನದಲ್ಲಿದ್ದೇನೆ ಎಂದು ಜೊಕೊವಿಕ್ ಹೇಳಿದ್ದಾರೆ.

ಇಂದಿನಿಂದ (ಜನವರಿ 14, ಭಾನುವಾರ) ಆಸ್ಟ್ರೇಲಿಯಾ ಓಪನ್ ಟೂರ್ನಿ ಆರಂಭವಾಗಲಿದೆ. ಸರ್ಬಿಯಾದ ತಾರೆ ನೊವಾಕ್ ಜೊಕೊವಿಕ್ ತಮ್ಮ ಮೊದಲ ಪಂದ್ಯದಲ್ಲಿ ಕ್ರೊಯೇಷಿಯಾದ ಡಿನೊ ಪ್ರಿಜ್ಮಿಕ್ ಅವರೊಂದಿಗೆ ಕಾದಾಡಲಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago