ಬೆಂಗಳೂರು: ಟೆನ್ನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರು ಕ್ರಿಕೆಟ್ ತಾರೆ ವಿರಾಟ್ ಕೊಹ್ಲ ಅವರನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮತ್ತು ಕೊಹ್ಲಿಯನ್ನು ನೇರವಾಗಿ ಭೇಟಿಯಾಗುವ ಬಯಕೆಯನ್ನು ಹೊಂದಿರುವುದಾಗಿ ಜೊಕೊವಿಕ್ ಹೇಳಿದ್ದಾರೆ.
ಜನವರಿ 14ರಿಂದ ಆರಂಭವಾಗಲಿರುವ 11ನೇ ಆಸ್ಟ್ರೇಲಿಯಾ ಓಪನ್ ಚಾಂಪಿಯನ್ಶಿಪ್ ಟೂರ್ನಿಗೂ ಮುನ್ನ ಸೋನಿ ಸ್ಪೋರ್ಟ್ಸ್ ಜೊತೆ ನಡೆದ ವಿಶೇಷ ಸಂದರ್ಶನದಲ್ಲಿ ತಾವು ವಿರಾಟ್ ಕೊಹ್ಲಿಯೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಾಗಿ ಜೊಕೊವಿಕ್ ಬಹಿರಂಗಪಡಿಸಿದ್ದಾರೆ.
ವಿರಾಟ್ ಅವರು ನನ್ನ ಬಗ್ಗೆ ಆಡವ ಮಾತುಗಳನ್ನು ಕೇಳಲು ತುಂಬಾ ಸಂತೋಷವಾಗುತ್ತದೆ. ಮತ್ತು ಅವರ ಸಾಧನೆಗಳನ್ನು ಕೇಳಲು ಹೆಮ್ಮೆ ಎನಿಸುತ್ತದೆ ಎಂದು ಸರ್ಬಿಯಾದ ತಾರೆ ನೊವಾಕ್ ಜೊಕೊವಿಕ್ ತಿಳಿಸಿದ್ದಾರೆ.
“ನನಗೆ ಭಾರತದ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವರ ಜೊತೆಗೆ ವೈಯಕ್ತಿಕವಾಗಿ ವಿಶೇಷ ಬಾಂಧವ್ಯ ಹೊಂದಿದ್ದೇನೆ. ನಮ್ಮಿಬ್ಬರ ನಡುವಿನ ಭಾಂದವ್ಯ ತುಂಬಾ ಚನ್ನಾಗಿದೆ. ಹಲವು ವರ್ಷಗಳಿಂದ ಸಂಪರ್ಕದಲ್ಲಿದ್ದರು ಒಮ್ಮೆಯೂ ವಯಕ್ತಿಕವಾಗಿ ಭೇಟಿಯಾಗಿಲ್ಲ. ವಿರಾಟ್ ಅವರನ್ನು ನೇರವಾಗಿ ಭೇಟಿ ಆಗಬೇಕು ಎಂದು ತುಂಬಾ ಅನಿಸುತ್ತದೆ. ಆತ(ಕೊಹ್ಲಿ) ನನ್ನ ಬಗ್ಗೆ ಆಡುವ ಮಾತುಗಳನ್ನು ಕೇಳಲು ಹಿತವಾಗಿರುತ್ತದೆ ಎಂದು ನೊವಾಕ್ ಜೊಕೊವಿಕ್ ಹೇಳಿದ್ದಾರೆ.
ವಿಶ್ವದಲ್ಲೇ ಅತ್ಯಂತ ಶ್ರೀಮಂತ ಕಲೆ ಹಾಗೂ ಸಂಸ್ಕೃತಿ ಹೊಂದಿರುವ ದೇಶವಾದ ಭಾರತಕ್ಕೆ ಶೀಘ್ರವೇ ಭೇಟಿ ನೀಡಲು ಬಯಸಿದ್ದೇನೆ ಎಂದಿದ್ದಾರೆ.
ನನ್ನ ವೃತ್ತಿ ಜೀವನ ನಮ್ಮ ಕುಟುಂಬಕ್ಕೆ ಹೆಮ್ಮೆ ತಂದಿದೆ: ನಾನು 4-5 ವರ್ಷ ಬಾಲಕನಾಗಿದ್ದಾಗಲೇ ಟೆನ್ನಿಸ್ ಲೋಕದಲ್ಲಿ ಬಲು ಎತ್ತರಕ್ಕೆ ಬೆಳೆಯುವ ಕನಸು ಕಂಡಿದ್ದೆ. ಈ ಸುಂದರವಾದ ಕ್ರೀಡೆಯಲ್ಲಿ ಹಲವಾರು ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿರುವುದು ನನಗೂ ಹಾಗೂ ನನ್ನ ಕುಟುಂಬದವರಿಗೂ ತುಂಬಾ ಹೆಮ್ಮೆ ಮೂಡಿಸಿದೆ,” ದೇವರ ಆಶೀರ್ವಾದದಿಂದ ಉತ್ತಮ ಸ್ಥಾನದಲ್ಲಿದ್ದೇನೆ ಎಂದು ಜೊಕೊವಿಕ್ ಹೇಳಿದ್ದಾರೆ.
ಇಂದಿನಿಂದ (ಜನವರಿ 14, ಭಾನುವಾರ) ಆಸ್ಟ್ರೇಲಿಯಾ ಓಪನ್ ಟೂರ್ನಿ ಆರಂಭವಾಗಲಿದೆ. ಸರ್ಬಿಯಾದ ತಾರೆ ನೊವಾಕ್ ಜೊಕೊವಿಕ್ ತಮ್ಮ ಮೊದಲ ಪಂದ್ಯದಲ್ಲಿ ಕ್ರೊಯೇಷಿಯಾದ ಡಿನೊ ಪ್ರಿಜ್ಮಿಕ್ ಅವರೊಂದಿಗೆ ಕಾದಾಡಲಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…