ದುಬೈ: ಮತ್ತೆ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಕಳೆದ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಸ್ಥಾನವನ್ನು ಕಪ್ತಾನ್ ಮಾಡಿಕೊಂಡ ಕಾರಣ ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮೈದಾನದಲ್ಲೇ ಹಾರ್ದಿಕ್ ವಿರುದ್ಧ ರೋಹಿತ್ ಅಭಿಮಾನಿಗಳು ಗೇಲಿ ಮಾಡಿದ್ದರು.
ಆದರೆ, ಕಳೆದ ವರ್ಷವೇ ನಡೆದ ಐಸಿಸಿ ಟಿ-20 ಟೂರ್ನಿಯಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಡುವ ಮೂಲಕ ಹಾರ್ದಿಕ್ ಭಾರತದ ನೈಜ ಆಲ್ರೌಂಡರ್ ಆಟಗಾರ ಎನಿಸಿದ್ದರು.
ಈ ಮೂಲಕ ಅಭಿಮಾನಿಗಳ ಹೃದಯವನ್ನು ನಾನು ಮರಳಿ ಗೆದ್ದಿದ್ದೇನೆ. ಇಲ್ಲಿಂದ ಹಿಂದಕ್ಕೆ ತಿರುಗಿ ನೋಡುವ ಅಗತ್ಯವಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಹೇಳಿಕೆಯನ್ನು ಬಿಸಿಸಿಐ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…