ಕ್ರೀಡೆ

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.

ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್‌ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.

“ಹೆಲ್ಮೆಟ್ ವಿಚಾರ ಸ್ವಲ್ಪ ಹೆಚ್ಚೇ ಆಗಿತ್ತು. ನಾನು ಹಾಗೆ ಮಾಡಬಾರದಿತ್ತು ಎಂದು ಕೆಲವು ದಿನಗಳ ಬಳಿಕ ಅರ್ಥವಾಗಿತ್ತು. ಅದು ಆ ಕ್ಷಣದಲ್ಲಿ ಸಂಭವಿಸಿ ಹೋಯಿತು. ನಾನು ಹಾಗೆ ಮಾಡಬಾರದಿತ್ತು ಎಂದು ಮತ್ತೆ ನನಗನಿಸಿತು” ಎಂದು ಆವೇಶ್ ಖಾನ್ ಹೇಳಿದ್ದಾರೆ.
ಐಪಿಎಲ್ 2023 ರ ಋತುವಿನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವೇಶ್ ಅವರು, ತಮ್ಮ ಮಟ್ಟವನ್ನು ತಲುಪದಿದ್ದರೂ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದರು.
andolanait

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

3 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

3 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

3 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

3 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

3 hours ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

4 hours ago