ಕ್ರೀಡೆ

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.

ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್‌ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.

“ಹೆಲ್ಮೆಟ್ ವಿಚಾರ ಸ್ವಲ್ಪ ಹೆಚ್ಚೇ ಆಗಿತ್ತು. ನಾನು ಹಾಗೆ ಮಾಡಬಾರದಿತ್ತು ಎಂದು ಕೆಲವು ದಿನಗಳ ಬಳಿಕ ಅರ್ಥವಾಗಿತ್ತು. ಅದು ಆ ಕ್ಷಣದಲ್ಲಿ ಸಂಭವಿಸಿ ಹೋಯಿತು. ನಾನು ಹಾಗೆ ಮಾಡಬಾರದಿತ್ತು ಎಂದು ಮತ್ತೆ ನನಗನಿಸಿತು” ಎಂದು ಆವೇಶ್ ಖಾನ್ ಹೇಳಿದ್ದಾರೆ.
ಐಪಿಎಲ್ 2023 ರ ಋತುವಿನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವೇಶ್ ಅವರು, ತಮ್ಮ ಮಟ್ಟವನ್ನು ತಲುಪದಿದ್ದರೂ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದರು.
andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago