ಕ್ರೀಡೆ

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.

ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್‌ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.

“ಹೆಲ್ಮೆಟ್ ವಿಚಾರ ಸ್ವಲ್ಪ ಹೆಚ್ಚೇ ಆಗಿತ್ತು. ನಾನು ಹಾಗೆ ಮಾಡಬಾರದಿತ್ತು ಎಂದು ಕೆಲವು ದಿನಗಳ ಬಳಿಕ ಅರ್ಥವಾಗಿತ್ತು. ಅದು ಆ ಕ್ಷಣದಲ್ಲಿ ಸಂಭವಿಸಿ ಹೋಯಿತು. ನಾನು ಹಾಗೆ ಮಾಡಬಾರದಿತ್ತು ಎಂದು ಮತ್ತೆ ನನಗನಿಸಿತು” ಎಂದು ಆವೇಶ್ ಖಾನ್ ಹೇಳಿದ್ದಾರೆ.
ಐಪಿಎಲ್ 2023 ರ ಋತುವಿನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವೇಶ್ ಅವರು, ತಮ್ಮ ಮಟ್ಟವನ್ನು ತಲುಪದಿದ್ದರೂ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದರು.
andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

56 mins ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

2 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

11 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

11 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

13 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

13 hours ago