ಕ್ರೀಡೆ

i20: ರೋಹಿತ್‌ ಶರ್ಮಾ ದಾಖಲೆ ಸರಿಗಟ್ಟಿದ ಮ್ಯಾಕ್ಸಿ!

ಅಡಿಲೇಡ್​: ಇಲ್ಲಿ ಓವಲ್‌ ಮೈದಾನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ವೆಸ್ಟ್‌ ಇಂಡೀಸ್‌ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ, ಗ್ಲೆನ್ ಮ್ಯಾಕ್ಸ್​ವೆಲ್ ಅವರ ಬಿರುಸಿನ ಬ್ಯಾಟಿಂಗ್​​ನಿಂದ ಕೇವಲ 50 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 5 ಶತಕ ಸಿಡಿಸಿದ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚುಟುಕು ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಐದು ಶತಕಗಳನ್ನು ಬಾರಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

ಹಿಟ್​ಮ್ಯಾನ್ ರೋಹಿತ್ ಶರ್ಮಾ 143 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅಳಿಸಿ ಹಾಕಿದ್ದಾರೆ. ಕೇವಲ 94 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಕ್ಸಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ವೆಸ್ಟ್‌ ಇಂಡೀಸ್‌ ವಿರುದ್ಧದ ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್​ವೆಲ್ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 120 ರನ್​ ಬಾರಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಪೇರಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 207 ರನ್​ಗಳಿಸಿ 34 ರನ್​ಗಳಿಂದ ಸೋಲನುಭವಿಸಿತು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago