ಕ್ರೀಡೆ

ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಮೊದಲ ಅಫ್ಘಾನ್ ಬ್ಯಾಟ್ಸ್‌ಮನ್ ಇಬ್ರಾಹಿಂ ಜದ್ರಾನ್!

ಮುಂಬೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಆ ದೇಶದ ಮೊದಲ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ಪಾತ್ರರಾದರು.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಪುರುಷರ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಇಬ್ರಾಹಿಂ ಚೊಚ್ಚಲ ಶತಕ ಬಾರಿಸಿದರು. ವಿಶ್ವಕಪ್ ನಲ್ಲಿ ಅವರು ಮೂರನೇ ಬಾರಿಗೆ ತಮ್ಮ ದೇಶಕ್ಕಾಗಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದರು.

21 ವರ್ಷ ವಯಸ್ಸಿನ ಇಬ್ರಾಹಿಂ, 131 ಎಸೆತಗಳಲ್ಲಿ ಏಳು ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು.  2015ರ ವಿಶ್ವಕಪ್ ನಲ್ಲಿ ದುನೇಡಿನ್ ನಲ್ಲಿ ಸ್ಕಾಟ್ ಲೆಂಡ್ ವಿರುದ್ಧ ಅಪ್ಘಾನ್ ಆಟಗಾರ ಸಮಿವುಲ್ಲಾ ಶಿನ್ವಾರಿ 96 ರನ್ ಗಳಿಸಿದ್ದರು.

ಈ ಹಿಂದೆ ಚೆನ್ನೈನಲ್ಲಿ  ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಜದ್ರಾನ್ 87 ರನ್ ಗಳಿಸಿದ್ದರು. ಇಂದಿನ ಪಂದ್ಯದಲ್ಲಿ ಆರಂಭಿಕರಾಗಿ ಕ್ರೀಸ್ ಗೆ ಇಳಿದ ಅವರ ಅಜೇಯ 129 ರನ್ ಗಳಿಸುವ ಮೂಲಕ ಅಪ್ಘಾನಿಸ್ತಾನ ಆಸೀಸ್ ವಿರುದ್ಧ 5 ವಿಕೆಟ್ ನಷ್ಟಕ್ಕೆ 291 ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಜದ್ರಾನ್ ಅವರ ಸಾಧನೆಗೆ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/IrfanPathan/status/1721858033880572135?s=20

andolanait

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

2 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

13 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

56 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago