ಕ್ರೀಡೆ

ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಮೊದಲ ಅಫ್ಘಾನ್ ಬ್ಯಾಟ್ಸ್‌ಮನ್ ಇಬ್ರಾಹಿಂ ಜದ್ರಾನ್!

ಮುಂಬೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಆ ದೇಶದ ಮೊದಲ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ಪಾತ್ರರಾದರು.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಪುರುಷರ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಇಬ್ರಾಹಿಂ ಚೊಚ್ಚಲ ಶತಕ ಬಾರಿಸಿದರು. ವಿಶ್ವಕಪ್ ನಲ್ಲಿ ಅವರು ಮೂರನೇ ಬಾರಿಗೆ ತಮ್ಮ ದೇಶಕ್ಕಾಗಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದರು.

21 ವರ್ಷ ವಯಸ್ಸಿನ ಇಬ್ರಾಹಿಂ, 131 ಎಸೆತಗಳಲ್ಲಿ ಏಳು ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು.  2015ರ ವಿಶ್ವಕಪ್ ನಲ್ಲಿ ದುನೇಡಿನ್ ನಲ್ಲಿ ಸ್ಕಾಟ್ ಲೆಂಡ್ ವಿರುದ್ಧ ಅಪ್ಘಾನ್ ಆಟಗಾರ ಸಮಿವುಲ್ಲಾ ಶಿನ್ವಾರಿ 96 ರನ್ ಗಳಿಸಿದ್ದರು.

ಈ ಹಿಂದೆ ಚೆನ್ನೈನಲ್ಲಿ  ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಜದ್ರಾನ್ 87 ರನ್ ಗಳಿಸಿದ್ದರು. ಇಂದಿನ ಪಂದ್ಯದಲ್ಲಿ ಆರಂಭಿಕರಾಗಿ ಕ್ರೀಸ್ ಗೆ ಇಳಿದ ಅವರ ಅಜೇಯ 129 ರನ್ ಗಳಿಸುವ ಮೂಲಕ ಅಪ್ಘಾನಿಸ್ತಾನ ಆಸೀಸ್ ವಿರುದ್ಧ 5 ವಿಕೆಟ್ ನಷ್ಟಕ್ಕೆ 291 ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಜದ್ರಾನ್ ಅವರ ಸಾಧನೆಗೆ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/IrfanPathan/status/1721858033880572135?s=20

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago