ಕ್ರೀಡೆ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025: ಭದ್ರತೆಗೆ 17 ಸಾವಿರ ಪೊಲೀಸರ ನಿಯೋಜನೆ

ಲಾಹೋರ್‌: ಪಾಕಿಸ್ತಾನದ ಕರಾಚಿ, ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್‌ ಸರ್ಕಾರ ನಿರ್ವಹಿಸಲಿದ್ದು, ಇದಕ್ಕಾಗಿ 12,500 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಲಾಹೋರ್‌ನಲ್ಲಿ ನಡೆಯುವ ಪಂದ್ಯಗಳಿಗೆ 7,600 ಪೊಲೀಸರು ಹಾಗೂ ಕಮಾಂಡೊ ಸಹಿತ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. 4,500 ಅಧಿಕಾರಿಗಳು ಹಾಗೂ ವಿಶೇಷ ಘಟಕದಿಂದ 411 ಸಿಬ್ಬಂದಿ ಭದ್ರತಾ ಹೊಣೆ ಹೊತ್ತಿದ್ದಾರೆ.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಭದ್ರತೆ ಕುರಿತು ಈಗಾಗಲೇ ಆಯುಕ್ತರು ಹಲವು ಬಾರಿ ಸಭೆ ನಡೆಸಿದ್ದು, ಇನ್ನೂ ಹೆಚ್ಚುವರಿಯಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿ ಚಾಂಪಿಯನ್ಸ್‌ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆ. ಭಾರತ ಮಾತ್ರ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ಆಂದೋಲನ ಡೆಸ್ಕ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

27 mins ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

1 hour ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

2 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

4 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

4 hours ago